ಕಲಬುರಗಿ| ಕ್ರೀಡಾಕೂಟದಲ್ಲಿ ಯತಿರಾಜ ಪ್ರೌಢಶಾಲೆ ಮಕ್ಕಳ ಅಪ್ರತಿಮ ಸಾಧನೆ

Date:

Share post:

ಕಲಬುರಗಿ: ಅಫಜಲಪುರ ತಾಲ್ಲೂಕಿನ ಶ್ರೀಕ್ಷೇತ್ರ ಗಾಣಗಾಪುರದ ಯತಿರಾಜ ಶಿಕ್ಷಣ ಸಂಸ್ಥೆಯ ಅಡಿಯಲ್ಲಿನ ಯತಿರಾಜ ಪ್ರೌಢಶಾಲೆಯ ಮಕ್ಕಳು 2025-26 ನೇ ಸಾಲಿನ ಅಫಜಲಪುರ ತಾಲ್ಲೂಕಿನ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಕ್ರೀಡೆಯಲ್ಲಿ ವಿಜೇತರಾಗಿ ಸಾಧನೆಗೈದಿದ್ದಾರೆ.

ಅಫಜಲಪೂರದ ತಾಲೂಕ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಬಾಲಕರ ಮತ್ತು ಬಾಲಕಿಯರ ಖೋ ಖೋ ಆಟದಲ್ಲಿ ಪ್ರಥಮ ಸ್ಥಾನ, ಬಾಲಕರ 4×100ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನ, ಬಾಲಕಿಯರು ದ್ವಿತೀಯ ಸ್ಥಾನ, ಬಾಲಕರ ವಾಲಿಬಾಲ್ ಆಟದಲ್ಲಿ ಪ್ರಥಮ, ಬಾಲಕಿಯರ ತ್ರೋ ಬಾಲ್ ಆಟದಲ್ಲಿ ಪ್ರಥಮ ಹಾಗೂ ವೈಯಕ್ತಿಕ ಕ್ರೀಡೆಯಲ್ಲಿ ಕುಮಾರಿ. ಅಕ್ಷತಾ ಸಿದ್ದಪ್ಪ 100, 200, 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಕಂಡು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಭೀಮರಾವ್ ಚೌಡಾಪುರಕರ, ಸಂಸ್ಥೆಯ ಅಧ್ಯಕ್ಷರಾದ ಚಂದ್ರ ವಿಲಾಸ್‌ಭಟ್ ಪೂಜಾರಿ, ಕಾರ್ಯದರ್ಶಿ ಋಷಿಕೇಶ್ ಚೌಡಾಪುರಕರ, ಗೋವಿಂದ್ ರಾವ್ ಚೌಡಾಪುರಕರ, ಪ್ರೌಢಶಾಲೆಯ ಮುಖ್ಯ ಗುರುಗಳಾದ ಮಹೇಬೂಬ ಕಣ್ಣಿ, ದೈಹಿಕ ಶಿಕ್ಷಕಿ ಸುಜಾತ ವಾಗ್ಮೊಡೆ, ರಾಜು ವಾಗ್ಮೊರೆ, ಶಿಕ್ಷಕ ಸಂತೋಷ್ ಶಂಡಗೆ ಹಾಗೂ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಮತ್ತು ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿದರೆಂದು ವಿಕಾಸ್ ಜಿ.ಪಂಚಾಳವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...