ಕಲಬುರಗಿ| ಕುಡಿಯುವ ನೀರನ್ನು ಕಾಯಿಸಿ ಕುಡಿಯಲು ಮನವಿ

Date:

Share post:

ಕಲಬುರಗಿ: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲ ಮೂಲ ನದಿಗಳಾದ ಭೀಮಾ ಹಾಗೂ ಬೆಣ್ಣೆತೋರಾ ನದಿಗಳ ಜಲಾನಯನ ಪ್ರದೇಶಗಳಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಮಣ್ಣು ಮಿಶ್ರಿತ ನೀರು ಬರುತ್ತಿದೆ. ಆದ್ದರಿಂದ ಈ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಾಗ್ಯೂ ಸಹ ಕಲಬುರಗಿ ನಗರದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕೆಂದು ಕಲಬುರಗಿ ಕೆಯುಐಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಕಲಬುರಗಿ ನಗರದ ಸಾರ್ವಜನಿಕರು ತಮ್ಮ ಮನೆಗಳಿಗೆ ತೆಗೆದುಕೊಂಡ ನಳದ ಜೋಡಣೆಗೆ ತೊಟ್ಟಿಯನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು. ನಳದ ತಗ್ಗುಗಳನ್ನು ಮುಚ್ಚಬೇಕು. ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೇ ನಳದ ತೊಟ್ಟಿಯಲ್ಲಿ ಸೇರುವ ಮೂಲಕ ಮುಂದಿನ ಗ್ರಾಹಕರಿಗೆ ತಲುಪಿ ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯಿದೆ. ನೀರಿನ ತೊಟ್ಟಿ ಅಳವಡಿಸುವುದರಿಂದ ನೀರು ಪೋಲಾಗದಂತೆ ನೋಡಿಕೊಳ್ಳಬಹುದಾಗಿದೆ.

ಆದ್ದರಿಂದ ಸಾರ್ವಜನಿಕರು ಕಲಬುರಗಿ ಮಹಾನಗರ ಪಾಲಿಕೆ, ಕೆಯುಐಡಿಎಫ್‍ಸಿ ಹಾಗೂ ಮೆ|| ಎಲ್ ಆಂಡ್ ಟಿ ಲಿಮಿಟೆಡ್ ಇವರೊಂದಿಗೆ ಸಹಕರಿಸಬೇಕು. ನೀರಿನ ಸಮಸ್ಯೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಗ್ರಾಹಕರ ಸೇವಾ ದೂರವಾಣಿ ಸಂಖ್ಯೆ: +91 1800 425 8247 (ccc) ಹಾಗೂ 08472-237247ಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...