ಕಲಬುರಗಿ| 2 ಲಕ್ಷ ಮೌಲ್ಯದ 200 ಮಹಾಗನಿ ಗಿಡ ಕಡಿದು ನಾಶ; ಇಬ್ಬರ ಆರೋಪಿಗಳ ಬಂಧನ

Date:

Share post:

ಕಲಬುರಗಿ: ನಗರದ ಹೊರವಲಯದಲ್ಲಿರುವ ಫರಹತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ತಾಡತೆಗನೂರ ಗ್ರಾಮದಲ್ಲಿ 2 ಲಕ್ಷ ರೂಪಾಯಿ ಮೌಲ್ಯದ 200 ಮಹಾಗನಿ ಗಿಡಗಳನ್ನು ಕಡಿದು ನಾಶ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಾಡತೆಗನೂರ ಗ್ರಾಮದ ನಿವಾಸಿಗಳಾದ ಶರಣಪ್ಪ ಧರ್ಮಣ್ಣ ಪೂಜಾರಿ ಹಾಗೂ ಹಣಮಂತ ಲಾಲಪ್ಪ ಹರಳಯ್ಯ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

ತಾಡತೆಗನೂರ ಗ್ರಾಮದ ಸರ್ವೆ ನಂ. 32/1 ನೇದ್ದರಲ್ಲಿ 3 ಎಕರೆ, 23 ಗುಂಟೆ ಜಮೀನಿನಲ್ಲಿ ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಅತಿಕ್ರಮ ಪ್ರವೇಶ ಮಾಡಿ 250 ಮಹಾಗನಿ ಗಿಡಗಳ ಪೈಕಿ 200 ಗಿಡಗಳನ್ನು ಕಡಿದು ಹೊಲದಲ್ಲಿಯೇ ಬಿಸಾಕಿ ಹೋಗಿದ್ದಾರೆ ಎಂದು ಅನ್ನಪೂರ್ಣ ಶಶಿಕಾಂತ ಹಿರೇಮಠ ಎಂಬಾತರು ಫರಹತಾಬಾದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ದೂರಿನ ಮೆರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಅದೇ ಗ್ರಾಮದ ಇಬ್ಬರು ಆರೋಪಿಗಳನ್ನು ಬಂಧಿಸಿ, ಆರೋಪಿತರಿಂದ ಕೃತ್ಯಕ್ಕೆ ಉಪಯೋಗಿಸಿದ 2 ಕೊಡಲಿಗಳನ್ನು ಜಪ್ತಿಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...