ಕಲಬುರಗಿ| ಗ್ರಂಥಾಲಯ ವಿಭಾಗಗಳು ಸ್ಥಾಪಿಸುವಲ್ಲಿ ರಂಗನಾಥರ ಕೊಡುಗೆ ಅಪಾರ: ಪ್ರೊ.ಯಾತನೂರ 

Date:

Share post:

ಕಲಬುರಗಿ: ಭಾರತದಲ್ಲಿ ಗ್ರಂಥಾಲಯ ವಿಜ್ಞಾನ ಶಿಕ್ಷಣದ ಸಾಂಸ್ಥಿಕೀಕರಣದಲ್ಲಿ ರಂಗನಾಥನ್ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಗ್ರಂಥಾಲಯ ವಿಜ್ಞಾನ ವಿಭಾಗಗಳನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಎಂದು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಯೋಜನಾಧಿಕಾರಿ ಪ್ರೊ. ಚಂದ್ರಕಾಂತ ಯಾತನೂರ ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ “ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ” ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮ ವಾರ್ಷಿಕೋತ್ಸವವನ್ನು ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿ ಡಾ. ಎಸ್ ಆರ್ ಅವರ ಜನ್ಮ ದಿನಾಚರಣೆ ದಿನದಂದು, ನಾವು ಅವರ ಪರಂಪರೆಯನ್ನು ಗೌರವಿಸುತ್ತೇವೆ, ಅವರಂತೆ ಪ್ರಾಮಾಣಿಕತೆ, ಸಮರ್ಪಣೆ ಮತ್ತು ಬದ್ಧತೆಯಿಂದ ಕೆಲಸ ಮಾಡಿ ಭಾರತೀಯ ಗ್ರಂಥಾಲಯದಲ್ಲಿ ಅವರ ಹೆಜ್ಜೆ ಗುರುತುಗಳನ್ನು ವಿದ್ಯಾರ್ಥಿಗಳು ಸಮಾಜಕ್ಕೆ ಜ್ಞಾನ ಮತ್ತು ಸಮಗ್ರತೆಯನ್ನು ಕೊಡಬೇಕು ಎಂದರು. ಇಂದು ತಂತ್ರಜ್ಞಾನ ತುಂಬಾ ಮುಂದುವರಿದಿದೆ ಇತ್ತೀಚಿನ ದಿನಗಳಲ್ಲಿ ಎಐ ತುಂಬಾ ಸದ್ದು ಮಾಡುತ್ತಿದೆ. ಡಿಜಿಟಲ್ಕರ್ಣ್ಕ್ಕಿಂತ ಕೈಯಲ್ಲಿ ಹಿಡಿದು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಯಾಕೆಂದರೆ ಒಂದು ಪುಸ್ತಕ ನೂರು ಸ್ನೇಹಿತರ ಸಮನಾಗಿ ಸಂತೋಷ ನೀಡುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಪ್ರೊ, ವಿ. ಟಿ. ಕಾಂಬಳೆ ಮಾತನಾಡಿ ಇಂದು ವಿದ್ಯಾರ್ಥಿಗಳು ಎಸ್ ಆರ್ ರಂಗನಾಥನ್ ಅವರ ಮುಖ್ಯವಾದ ಕೊಡುಗೆಯನ್ನು ಅಭ್ಯಾಸ ಮಾಡಬೇಕು. ಯಾವ ಶೈಕ್ಷಣಿಕ ಸಂಸ್ಥೆಗಳಲ್ಲಿ ಗ್ರಂಥಾಲಯ ಇರುವುದಿಲ್ಲವೋ ಆ ಸಂಸ್ಥೆಯು ಶೈಕ್ಷಣಿಕ ಗುಣಮಟ್ಟವನ್ನು ಕಳೆದುಕೊಳ್ಳುತ್ತದೆ. ಶಿಕ್ಷಣ ಸಂಸ್ಥೆಗಳಿಗೆ ಗ್ರಂಥಾಲಯ ಹೃದಯ ಭಾಗ ಇದ್ದಂತೆ. ಭಾರತದ ಅತ್ಯಂತ ಹಳೆಯ ನಳಂದ ವಿಶ್ವವಿದ್ಯಾಲಯಕ್ಕೆ ವಿದೇಶಿಯರು ಬರುತ್ತಿದ್ದರು ಸಂಶೋಧನೆ ಮಾಡುವುದಕ್ಕೆ. ಹೀಗಾಗಿ ಗ್ರಂಥಾಲಯ ಸಂಶೋಧಕರಿಗೆ ಜ್ಞಾನದ ಭಂಡಾರವಾಗಿದೆ ಎಂದು ಅವರು ತಿಳಿಸಿದರು.

ನಿವೃತ್ತ ಪ್ರಾಧ್ಯಾಪಕ ಪ್ರೊ, ಡಿ. ಬಿ. ಪಾಟೀಲ್, ಡಾ. ರಾಜಕುಮಾರ ದಣ್ಣೂರ ಇದ್ದರು. ವಿದ್ಯಾರ್ಥಿಗಳಾದ ಪ್ರೇಮಾ, ಅರ್ಚನಾ, ಸಾವಿತ್ರಿ, ಉಪಸ್ಥಿತರಿದ್ದರು. ಪ್ರೀತಿ ಸ್ವಾಗತ ಗೀತೆ ಹಾಡಿದರು. ಮುಸ್ತಾಫ್ ನಿರೂಪಿಸಿದರು, ಅಂಬರೀಶ್ ಸ್ವಾಗತಿಸಿದರು, ವಿರೇಶ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...