ಕಲಬುರಗಿ| ವಿಷ ಸೇವಿಸಿ ರೈತ ಆತ್ಮಹತ್ಯೆ

Date:

Share post:

ಕಲಬುರಗಿ: ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾದ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಅಂಕಲಗಾ ಗ್ರಾಮದ ತಾಂಡಾದಲ್ಲಿ ನಡೆದಿದೆ.

ಅಂಕಲಗಾ ತಾಂಡಾದ ನಿವಾಸಿ ಲಕ್ಷ್ಮಣ ಸೋಮುಲು ರಾಠೋಡ (65) ಮೃತ ರೈತರೆಂದು ಎಂದು ಗುರುತಿಸಲಾಗಿದೆ.

ಮೂರು ದಿನಗಳ ಹಿಂದೆ ವಿಷ ಸೇವನೆ ಮಾಡಿದ ರೈತನನ್ನು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

2ಎಕರೆ 10 ಗುಂಟೆ ಹೊಂದಿದ ಮೃತ ರೈತನ ಹೆಸರಿನಲ್ಲಿ ಪ್ರಗತಿ ಕೃಷ್ಣಾ ಬ್ಯಾಂಕ್‌ನಲ್ಲಿ 2 ಲಕ್ಷ, ಇಟಗಾ ಸಹಕಾರಿ ಬ್ಯಾಂಕ್ ನಲ್ಲಿ 50 ಸಾವಿರ ರೂ. ಸೇರಿದಂತೆ ಖಾಸಗಿಯಾಗಿ 6 ಲಕ್ಷ ರೂ. ಸಾಲವಿತ್ತು ಎಂದು ಮೂಲಗಳು ತಿಳಿಸಿವೆ.

ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...