ಕಲಬುರಗಿ| ಅಮರ್ಜಾ ಆಣೆಕಟ್ಟಿನಿಂದ ನೀರು ಬಿಡುಗಡೆ: ಎಚ್ಚರಿಕೆಯಿಂದಿರಲು ಸೂಚನೆ

Date:

Share post:

ಕಲಬುರಗಿ: ಅಮರ್ಜಾ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿಯ ಮುಖಾಂತರ ನದಿ ಪಾತಳಿಗೆ ಹರಿಬಿಡಲಾಗುತ್ತಿದ್ದು, ನದಿಯ ಅಕ್ಕಪಕ್ಕದ ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐಪಿಸಿ ವಿಭಾಗ ನಂ.-1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಸಧ್ಯದ ಪರಿಸ್ಥಿತಿಯಲ್ಲಿ ಜಲಾನಯನ ಪ್ರದೇಶದಲ್ಲಿ ಇನ್ನೂ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದು, ಹರಿದು ಬಂದ ಹೆಚ್ಚುವರಿ ನೀರನ್ನು ನದಿ ಪಾತಾಳಿಗೆ ಹರಿಬಿಡಲಾಗುತ್ತದೆ. ಆದ್ದರಿಂದ ನದಿ ಅಕ್ಕಪಕ್ಕದ ರೈತರು/ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿಗಳನ್ನು ಹಾಗೂ ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...