ಕಲಬುರಗಿ| ಅಮರ್ಜಾ ಆಣೆಕಟ್ಟಿನಿಂದ ನೀರು ಬಿಡುಗಡೆ: ಎಚ್ಚರಿಕೆಯಿಂದಿರಲು ಸೂಚನೆ

Date:

Share post:

ಕಲಬುರಗಿ: ಅಮರ್ಜಾ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿಯ ಮುಖಾಂತರ ನದಿ ಪಾತಳಿಗೆ ಹರಿಬಿಡಲಾಗುತ್ತಿದ್ದು, ನದಿಯ ಅಕ್ಕಪಕ್ಕದ ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐಪಿಸಿ ವಿಭಾಗ ನಂ.-1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಸಧ್ಯದ ಪರಿಸ್ಥಿತಿಯಲ್ಲಿ ಜಲಾನಯನ ಪ್ರದೇಶದಲ್ಲಿ ಇನ್ನೂ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದು, ಹರಿದು ಬಂದ ಹೆಚ್ಚುವರಿ ನೀರನ್ನು ನದಿ ಪಾತಾಳಿಗೆ ಹರಿಬಿಡಲಾಗುತ್ತದೆ. ಆದ್ದರಿಂದ ನದಿ ಅಕ್ಕಪಕ್ಕದ ರೈತರು/ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿಗಳನ್ನು ಹಾಗೂ ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...