ಕಲಬುರಗಿ| ಅಮರ್ಜಾ ಆಣೆಕಟ್ಟಿನಿಂದ ನೀರು ಬಿಡುಗಡೆ: ಎಚ್ಚರಿಕೆಯಿಂದಿರಲು ಸೂಚನೆ

Date:

Share post:

ಕಲಬುರಗಿ: ಅಮರ್ಜಾ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿಯ ಮುಖಾಂತರ ನದಿ ಪಾತಳಿಗೆ ಹರಿಬಿಡಲಾಗುತ್ತಿದ್ದು, ನದಿಯ ಅಕ್ಕಪಕ್ಕದ ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐಪಿಸಿ ವಿಭಾಗ ನಂ.-1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಸಧ್ಯದ ಪರಿಸ್ಥಿತಿಯಲ್ಲಿ ಜಲಾನಯನ ಪ್ರದೇಶದಲ್ಲಿ ಇನ್ನೂ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದು, ಹರಿದು ಬಂದ ಹೆಚ್ಚುವರಿ ನೀರನ್ನು ನದಿ ಪಾತಾಳಿಗೆ ಹರಿಬಿಡಲಾಗುತ್ತದೆ. ಆದ್ದರಿಂದ ನದಿ ಅಕ್ಕಪಕ್ಕದ ರೈತರು/ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿಗಳನ್ನು ಹಾಗೂ ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...