ಕಲಬುರಗಿ| ಅಮರ್ಜಾ ಆಣೆಕಟ್ಟಿನಿಂದ ನೀರು ಬಿಡುಗಡೆ: ಎಚ್ಚರಿಕೆಯಿಂದಿರಲು ಸೂಚನೆ

Date:

Share post:

ಕಲಬುರಗಿ: ಅಮರ್ಜಾ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿಯ ಮುಖಾಂತರ ನದಿ ಪಾತಳಿಗೆ ಹರಿಬಿಡಲಾಗುತ್ತಿದ್ದು, ನದಿಯ ಅಕ್ಕಪಕ್ಕದ ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐಪಿಸಿ ವಿಭಾಗ ನಂ.-1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಸಧ್ಯದ ಪರಿಸ್ಥಿತಿಯಲ್ಲಿ ಜಲಾನಯನ ಪ್ರದೇಶದಲ್ಲಿ ಇನ್ನೂ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದು, ಹರಿದು ಬಂದ ಹೆಚ್ಚುವರಿ ನೀರನ್ನು ನದಿ ಪಾತಾಳಿಗೆ ಹರಿಬಿಡಲಾಗುತ್ತದೆ. ಆದ್ದರಿಂದ ನದಿ ಅಕ್ಕಪಕ್ಕದ ರೈತರು/ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿಗಳನ್ನು ಹಾಗೂ ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...