ಕಲಬುರಗಿ| ತಕ್ಷಣವೇ ಹೆಸರು ಖರೀದಿ ಕೇಂದ್ರ ಸ್ಥಾಪಿಸಿ: ಮಲ್ಲಿನಾಥ್ ನಾಗನಹಳ್ಳಿ ಆಗ್ರಹ

Date:

Share post:

ಕಲಬುರಗಿ: ಸ್ಥಳೀಯ ರೈತರಿಗೆ ನ್ಯಾಯಸಮ್ಮತ ಬೆಲೆ ದೊರಕಿಸಲು ಹಾಗೂ ಅವರ ಆರ್ಥಿಕ ಹಿತಾಸಕ್ತಿಯನ್ನು ಕಾಪಾಡಲು ಹೆಸರು (ಹುರಳಿ) ಖರೀದಿ ಕೇಂದ್ರವನ್ನು ತಕ್ಷಣ ಸ್ಥಾಪಿಸುವಂತೆ ಕೋಟನೂರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಲ್ಲಿನಾಥ್ ನಾಗನಹಳ್ಳಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೋಟನೂರ್, ಉದನೂರ್, ನಂದಿಕೂರ್, ನಾಗನಹಳ್ಳಿ, ಪಾಣೆಗಾವ್ , ಸೀತನೂರ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ಹೆಸರು ಬೆಲೆಯಲ್ಲಿ ಉಂಟಾದ ತೀವ್ರ ಕುಸಿತದಿಂದ ನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಮಾನ್ಯತೆ ಪಡೆದ ಖರೀದಿ ಕೇಂದ್ರವನ್ನು ತುರ್ತಾಗಿ ಕಾರ್ಯಾರಂಭ ಮಾಡುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

“ಖರೀದಿ ಕೇಂದ್ರ ಆರಂಭವಾದರೆ ಸಾವಿರಾರು ರೈತರಿಗೆ ನೇರ ಲಾಭ ದೊರೆಯುತ್ತದೆ. ಇದು ಮಾರುಕಟ್ಟೆ ದರದಲ್ಲಿ ಸ್ಥಿರತೆ ತರಲಿದೆ ಹಾಗೂ ರೈತರ ಬದುಕಿಗೆ ಭದ್ರತೆ ನೀಡಲಿದೆ” ಎಂದು ಮಲ್ಲಿನಾಥ್ ನಾಗನಹಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ರೈತರ ಹೋರಾಟಗಳಿಗೆ ಸದಾ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಅವರು, ಸರ್ಕಾರ ತ್ವರಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...