ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Date:

Share post:

ಕಲಬುರಗಿ: ಆಳಂದ ತಾಲೂಕಿನ ತಡಕಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಪ್ರಕ್ರಿಯೆ ಇತ್ತೀಚಿಗೆ ಜರುಗಿತು.

ನೇಮಕ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊoದೆ ನಾಮಪತ್ರಗಳು ಸಲ್ಲಿಕೆಯಾಗಿರುವುದರಿಂದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ಜರುಗಿತು.

ಇತ್ತೀಚಿಗೆ ಜರುಗಿದ ಚುನಾವಣೆಯಲ್ಲಿ 12 ನಿರ್ದೇಶಕ ಸ್ಥಾನಗಳಲ್ಲಿ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಬೆಂಬಲಿತ 11 ಜನ ನಿರ್ದೇಶಕರು ಬಹುಮತದಿಂದ ಆಯ್ಕೆಯಾಗಿದ್ದರು.

ನೂತನ ಅಧ್ಯಕ್ಷರಾಗಿ ಚಂದ್ರಕಾoತ ಶಿರೋಳೆ, ಉಪಾಧ್ಯಕ್ಷರಾಗಿ ಅಂಕುಶ ಮೈಂದೆ ಆಯ್ಕೆಯಾದರು. ನಂತರ ವಿಜಯೋತ್ಸದ ಜರುಗಿತು. ವಿಜಯೋತ್ಸವದಲ್ಲಿ ಮುಖಂಡರಾದ ಶಿವಪುತ್ರಪ್ಪ ಬೆಳ್ಳೆ, ತಿಪ್ಪಯ್ಯ ಗುತ್ತೇದಾರ, ಮಲ್ಲಿಕಾರ್ಜುನ ಮಾನೋಳೆ, ಅನೀಲ ಜಮಾದಾರ ಸೇರಿದಂತೆ ಪ್ರಮುಖರು ಹಾಗೂ ನೂತನ ನಿರ್ದೇಶಕರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...