ಕಲಬುರಗಿ| ಜಿಲ್ಲಾಧಿಕಾರಿಗಳಿಂದ‌ ಬೆಳೆ ಹಾನಿ‌ ಪ್ರದೇಶ ವೀಕ್ಷಣೆ

Date:

Share post:

ಕಲಬುರಗಿ: ಜಿಲ್ಲೆಯ ಕಾಳಗಿ ಹಾಗೂ ಚಿಂಚೋಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಬೆಳೆ ಹಾನಿ ಕುರಿತಂತೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರುನ್ನಮ್ ಅವರು ಮಂಗಳವಾರ ಪರಿವೀಕ್ಷಣೆ ನಡೆಸಿದರು.

ಇದೇ ಸಂದರ್ಭದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಸಹ ಪರಿಶೀಲಿಸಿ ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ ಕರೆದು ವಿಪತ್ತು ನಿರ್ವಹಣಾ ಕೆಲಸಗಳನ್ನು ಪ್ರಥಮಾದ್ಯತೆ ಮೇಲೆ ಮಾಡುವಂತೆ ಸೂಚಿಸಿದರು.

ಕಾಳಗಿಯಲ್ಲಿ ನಿರ್ಮಿಸಲಾಗಿರುವ ಚುನಾವಣಾ ಸ್ಟ್ರಾಂಗ್ ರೂಮ್ ವೀಕ್ಷಿಸಿದ ಜಿಲ್ಲಾಧಿಕಾರಿಗಳು ನಂತರ ಲೋಕೋಪಯೋಗಿ ಇಲಾಖೆಯಿಂದ ಕೊಡ್ಲಿ ಕ್ರಾಸ್ ನಲ್ಲಿನ ವಿವಿಧ ಕಾಮಗಾರಿಗಳು ಮತ್ತು ಕೋರವಾರದಿಂದ ವಚ್ಚಾದವರೆಗೆ ನಿರ್ಮಿಸಲಾಗುತ್ತಿರುವ ಬ್ರಿಡ್ಜ್ ಕಾಮಗಾರಿ ಪರಿವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಹಾಯಕ ಆಯುಕ್ತರಾದ ಸಾಹಿತ್ಯ, ಪ್ರಭುರೆಡ್ಡಿ, ತಹಶೀಲ್ದಾರರಾದ ಸುಬ್ಬಣ್ಣ ಜಮಖಂಡಿ, ಪೃಥ್ವಿರಾಜ್‌, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ಸುಭಾಷ ಬಿರಾದಾರ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...