ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

Date:

Share post:

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ಗ್ರಾಮಗಳಲ್ಲಿ ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ ಸಾಕಷ್ಟು ಬೆಳೆ ಹಾನಿ ಸಂಭವಿಸಿದೆ. ಈ ವ್ಯಾಪ್ತಿಯನ್ನು ಅತೀವೃಷ್ಟಿ ಪೀಡಿತ ಪ್ರದೇಶ ಎಂದು ಘೋಷಿಸಬೇಕೆಂದು ಕೋಟನೂರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಲ್ಲಿನಾಥ ನಾಗನಹಳ್ಳಿ ಆಗ್ರಹಿಸಿದ್ದಾರೆ.

ಈ ಪ್ರದೇಶದಲ್ಲಿ ಸುರಿದ ಭಾರೀ ಮಳೆಯ ಪ್ರಮಾಣದಿಂದಾಗಿ ಸೋಯಾಬೀನ್, ಉದ್ದು, ಹೆಸರು, ಜೋಳ, ಹತ್ತಿ ಮುಂತಾದ ಪ್ರಮುಖ ಕೃಷಿ ಬೆಳೆಗಳು ನೀರುಪಾಲಾಗಿ ಸಾವಿರಾರು ಹೆಕ್ಟೇರ್ ಭೂಮಿಯು ಹಾನಿಗೊಳಗಾಗಿದ್ದು, ರೈತರ ಜೀವನ ಭವಿಷ್ಯ ಗೊಂದಲಕ್ಕೆ ಒಳಗಾಗಿದೆ. ಕೂಡಲೇ ರೈತರ ಪರ ಸರ್ಕಾರ ಧಾವಿಸಲಿ ಎಂದು ಒತ್ತಾಯಿಸಿದ್ದಾರೆ.

ರೈತರು ವಿವಿಧ ಮೂಲಗಳಿಂದ ಸಾಲ ತೆಗೆದುಕೊಂಡು ಜಮೀನುಗಳಲ್ಲಿ ಬೀಜ, ರಸಗೊಬ್ಬರ ಸೇರಿದಂತೆ ಮತ್ತಿತರ ಸಾಮಗ್ರಿಗಳನ್ನು ಖರೀದಿಸಿ, ಬಿತ್ತನೆ ಹಾಕಿದ್ದಾರೆ, ಆದರೆ ಏಕಾಏಕಿ ಮಳೆ ನಿರಂತರ ಸುರಿಯುತ್ತಿರುವುದರಿಂದ ಬೆಳೆ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...