ಕಲಬುರಗಿ; ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಡಾ. ಶ್ರೀದೇವಿ ಕಲ್ಯಾಣ್ ಅವರು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ, ಉನ್ನತ ಶಿಕ್ಷಣ ಇಲಾಖೆಯು 2025ರ ಶಿಕ್ಷಕರಿಗೆ ನೀಡುವ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆಯಲು ಆಯ್ಕೆ ಮಾಡಿದ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಪಾಲಿಟೆಕ್ನಿಕ್ಗಳಿಂದ ದೇಶದ 21 ಶಿಕ್ಷಕರಲ್ಲಿ ಒಬ್ಬರಾಗಿದ್ದಾರೆ.
50,000 ರೂ. ನಗದು ಮತ್ತು ಬೆಳ್ಳಿ ಪದಕವನ್ನು ಹೊಂದಿರುವ ಪ್ರಶಸ್ತಿಯನ್ನು ಪಡೆಯಲು ಆಯ್ಕೆಯಾದ ಕರ್ನಾಟಕದ ಮೂವರು ಶಿಕ್ಷಕರಲ್ಲಿ ಡಾ. ಶ್ರೀದೇವಿ ಕಲ್ಯಾಣ್ ಕೂಡ ಒಬ್ಬರು. ಈ ವರ್ಷ ಸೆಪ್ಟೆಂಬರ್ 05 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗುವುದು. ಪ್ರಶಸ್ತಿಯನ್ನು ಸ್ವೀಕರಿಸಲು ಆಯ್ಕೆಯಾದ ಕರ್ನಾಟಕದ ಇತರ ಇಬ್ಬರು ಶಿಕ್ಷಕರಿಗೆ ಉಡುಪಿಯ ಮಣಿಪಾಲ ತಂತ್ರಜ್ಞಾನ ಸಂಸ್ಥೆಯ ಡಾ. ಶೋಭಾ ಎಂ. ಇ. ಮತ್ತು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ಪೆÇ್ರ. ಶ್ರೀವರ್ಧಿನಿ ಕೇಶವಮೂರ್ತಿ ಝಾ ಸೇರಿದ್ದಾರೆ.
ಪ್ರಶಸ್ತಿ ಸ್ವೀಕರಿಸಲು ಆಯ್ಕೆಯಾದ ಶಿಕ್ಷಕರು ಐಐಟಿಗಳು, ಐಐಎಂಗಳು, ಕೇಂದ್ರೀಯ ವಿಶ್ವವಿದ್ಯಾಲಯಗಳು, ಬಿರ್ಲಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಅಂಡ್ ಟೆಕ್ನಾಲಜಿ (ಐಐಎಸ್ಟಿ), ತಿರುವನಂತಪುರ ಮತ್ತು ಇತರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೇರಿದವರಾಗಿದ್ದಾರೆ.
ಡಾ. ಶ್ರೀದೇವಿ ಕಲ್ಯಾಣ್ ಅವರು ಪ್ರಸ್ತುತ ಶರಣಬಸವ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದಲ್ಲಿ ಗಣಿತಶಾಸ್ತ್ರದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯು ಶೈಕ್ಷಣಿಕ ಚಟುವಟಿಕೆಗಳ ಸಂಪೂರ್ಣ ವಿವರಗಳೊಂದಿಗೆ ಪ್ರಶಸ್ತಿಯನ್ನು ಸ್ವೀಕರಿಸಲು ಶಿಕ್ಷಕರಿಂದ ಅರ್ಜಿಗಳನ್ನು ಆಹ್ವಾನಿಸಿ, ಉನ್ನತ ಅಧ್ಯಯನ ಸಂಸ್ಥೆಗಳು ಮತ್ತು ತಜ್ಞರ ಎಂಟು ಸದಸ್ಯರ ತೀರ್ಪುಗಾರರು ವೈಯಕ್ತಿಕ ಶಿಕ್ಷಕರೊಂದಿಗೆ ಅವರ ಬೋಧನಾ ಚಟುವಟಿಕೆಗಳು, ಸಂಶೋಧನಾ ಪ್ರಕಟಣೆಗಳು, ಶೈಕ್ಷಣಿಕ ಪ್ರಗತಿ, ಅವರು ಅಳವಡಿಸಿಕೊಂಡ ನವೀನ ಬೋಧನಾ ವಿಧಾನಗಳು ಮತ್ತು ಅವರು ವಿದ್ಯಾರ್ಥಿಗಳನ್ನು ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ಹೇಗೆ ತೊಡಗಿಸಿಕೊಳ್ಳುತ್ತಾರೆ ಹಾಗೂ ವೈಯಕ್ತಿಕ ವಿದ್ಯಾರ್ಥಿಗಳಿಂದ ಉತ್ತಮವಾದದ್ದನ್ನು ಹೇಗೆ ಹೊರತರುತ್ತಾರೆ ಎಂಬುದರ ಕುರಿತು ವಿವರವಾದ ಆನ್ಲೈನ್ ಸಂದರ್ಶನವನ್ನು ನಡೆಸಿದರು.
ವಿಶ್ವವಿದ್ಯಾಲಯದ ಹಿರಿಯ ಅಧ್ಯಾಪಕರಲ್ಲಿ ಒಬ್ಬರಾದ ಡಾ. ಶ್ರೀದೇವಿ ಕಲ್ಯಾಣ್ ಅವರು ಇದುವರೆಗೆ ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ 40 ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ ಮತ್ತು ಮೂರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.
ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ, ಶ್ರೀ ಬಸವರಾಜ ದೇಶಮುಖ, ವಿವಿಯ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ, ಕುಲಸಚಿವ ಡಾ. ಎಸ್. ಜಿ. ಡೊಳ್ಳೇಗೌಡರ್, ಡೀನ್ ಡಾ. ಲಕ್ಷ್ಮಿ ಪಾಟೀಲ್ ಮಾಕಾ, ಕುಲಸಚಿವ(ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ ಸೇರಿದಂತೆ ಇತರರು ಡಾ. ಶ್ರೀದೇವಿ ಕಲ್ಯಾಣ್ ಅವರನ್ನು ಪ್ರಶಸ್ತಿಯೊಂದಿಗೆ ಶರಣಬಸವ ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿದ್ದಕ್ಕಾಗಿ ಅಭಿನಂದಿಸಿದ್ದಾರೆ.


