ಕಲಬುರಗಿ| ಧಾರ್ಮಿಕ ಕಾರ್ಯಗಳಿಂದ ಸಮಾಜದಲ್ಲಿ ಸಾಮರಸ್ಯ: ಹಾರಕೂಡ ಶ್ರೀ 

Date:

Share post:

ಕಲಬುರಗಿ: ಆಳಂದ ತಾಲೂಕಿನ ಕೋತನ ಹಿಪ್ಪರಗಾ ಗ್ರಾಮದಲ್ಲಿ ಹಾರಕೂಡ ಮಠದ ಡಾ. ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಶ್ರೀ ಮಹದೇವಲಿಂಗ ದೇವಸ್ಥಾನದ 28ನೇ ವರ್ಷದ ಭಜನಾ ಮಹಾಮಂಗಳ ಕಾರ್ಯಕ್ರಮ ಸಂಭ್ರಮದ ಮಧ್ಯ ದುರಿಯಾಗಿ ಜರುಗಿತು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಹಾರಕೂಡ ಮಠದ ಡಾ. ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು, “ಈ ಭಜನಾ ಮಹಾಮಂಗಳ ಕಾರ್ಯಕ್ರಮವು ಗ್ರಾಮದ ಜನರ ಸಾಮರಸ್ಯ ಮತ್ತು ಧಾರ್ಮಿಕ ಭಾವನೆಯನ್ನು ಬೆಳೆಸುವ ಉದ್ದೇಶದಿಂದ ೨೮ ವರ್ಷಗಳಿಂದ ನಡೆಯುತ್ತಿದೆ. ಶ್ರೀ ಮಹದೇವಲಿಂಗದೇವರ ಆಶೀರ್ವಾದದಿಂದ ಈ ಗ್ರಾಮವು ಶಾಂತಿ ಮತ್ತು ಸೌಭಾಗ್ಯವನ್ನು ಪಡೆದುಕೊಂಡಿದೆ. ಆದರೆ ಇಂದಿನ ಯುವಕರು ದುಷ್ಟ ಚಟಕೆಗಳ ಬಲಿಯಾಗುತ್ತಿದ್ದಾರೆ. ಸಾರಾಯಿ ಡ್ರಗ್ಸ್, ಅಪರಾಧ ಮತ್ತು ಕೆಟ್ಟ ಸಹವಾಸಗಳಿಂದ ದೂರ ಉಳಿಯುವುದು ಮುಖ್ಯ. ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಯುವ ಜನಾಂಗವು ಸರಿಯಾದ ಮಾರ್ಗದರ್ಶನ ಪಡೆಯಬೇಕು. ಈ ಕಾರ್ಯಕ್ರಮವು ಎಲ್ಲರಿಗೂ ಏಕತೆ ಮತ್ತು ಸೌಭಾಗ್ಯ ತರಲಿ ಎಂದು ಆಶಿಸುತ್ತೇನೆ” ಎಂದು ಹೇಳಿದರು.

 

ಕೆಎಂಎಫ್ ಅಧ್ಯಕ್ಷ ಆರ್.ಕೆ. ಪಾಟೀಲ ಮಾತನಾಡಿ, “ಗ್ರಾಮದಲ್ಲಿ ಸಾಮರಸ್ಯವೇ ಇದ್ದರೆ 28 ವರ್ಷಗಳಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಶ್ರೀಗಳ ಆಶೀರ್ವಾದದಿಂದ ಇದು ಮುಂದುವರಿದಿದೆ. ಆದರೆ ಇಂದಿನ ಯುವಕರು ದುಷ್ಟ ಚಟಕೆಗಳಿಗೆ ಬಲಿಯಾಗುತ್ತಿದ್ದಾರೆ. ಅವರು ಸರಿಯಾದ ಮಾರ್ಗದಲ್ಲಿ ನಡೆಯಬೇಕು” ಎಂದು ಹೇಳಿದರು. ಕಾಂಗ್ರೆಸ್ ಮುಖಂಡ ಅಸುಭಾಷ್ ಮುರುಡ್ ಮತ್ತು ಇತರರು ಸಾಮರಸ್ಯ ಮತ್ತು ಧಾರ್ಮಿಕತೆಯ ಮಹತ್ವದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಅಸುಭಾಷ್ ಮುರುಡ್, ವೇದ ಮೂರ್ತಿ ಬಸಯ್ಯ ಸ್ವಾಮಿ, ಶಿವಪುಜಪ್ಪ ಇಸ್ರಾಜಿ, ನ್ಯಾಯವಾದಿ ದಿಲೀಪ್ ಕ್ಷೀರ್ ಸಾಗರ, ರಾಜೇಂದ್ರ ಸಾಲೇಗಾoವ್, ಕೆಎಂಎಫ್ ಅಧ್ಯಕ್ಷ ಆರ್.ಕೆ. ಪಾಟೀಲ ಸೇರಿದಂತೆ ಅನೇಕ ಮುಖ್ಯ ಅತಿಥಿಗಳು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಗ್ರಾಮಗಳ ಭಜನೆ ತಂಡಗಳು ಭಾಗವಹಿಸಿ ಭಜನೆ ಕೈಗೊಂಡ ಬೆಳಗಿನ ಜಾವ ಮಹದೇವ ಲಿಂಗಕ್ಕೆ ಪೂಜೆಗಳು ಮತ್ತು ಆಶೀರ್ವಚನಗಳು ನಡೆದು, ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...