ಕಲಬುರಗಿ| ಬೇರೆ ಜಾತಿ ಯುವಕನನ್ನ ಮದ್ವೆಗೆ ಪಟ್ಟು; ಮಗಳ ಜೀವ ತೆಗೆದ ತಂದೆ: ಬಂಧನ

Date:

Share post:

ಕಲಬುರಗಿ: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತನ್ನ ಮಗಳನ್ನೇ ಕತ್ತು ಹಿಸುಕಿ, ಸುಟ್ಟು ಹಾಕಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ.

ಕವಿತಾ ಶಂಕರ ಕೊಳ್ಳೂರ(18) ಎಂಬ ಯುವತಿಯೇ ಮರ್ಯಾದಾ ಹತ್ಯೆಗೆ ಬಲಿಯಾದ ದುರ್ದೈವಿ ಎಂದು ತಿಳಿದುಬಂದಿದೆ.

ಆರೋಪಿಗಳಾದ ಮೃತ ಯುವತಿಯ ತಂದೆ ಶಂಕರ ಕೊಳ್ಳುರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನೊಂದಿಗೆ ಇದ್ದ ಇನ್ನಿಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಿಂಗಾಯತ ಸಮುದಾಯದ ಯುವತಿ ಕವಿತಾ, ಮೇಳಕುಂದಾ (ಬಿ) ಗ್ರಾಮದಲ್ಲೇ ಕುರುಬ ಸಮುದಾಯದ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತಂದೆ ಹಾಗೂ ಕುಟುಂಬಸ್ಥರು ಕಾಲೇಜು ಬಿಡಿಸಿದ್ದಾರೆ. ಆದರೂ ಆಕೆ ಯುವಕನನ್ನು ಪ್ರೀತಿಸುವುದನ್ನು ಬಿಡದಿರಲು ತೀರ್ಮಾನಿಸಿದ್ದಾಳೆ. ಇದರಿಂದ ಕೋಪಗೊಂಡ ತಂದೆ ಹಾಗೂ ಆಕೆಯ ಸಂಬಂಧಿಕರು ಸೇರಿ ಯುವತಿಯನ್ನು ಕೊಲೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇಳಕುಂದಾ (ಬಿ) ಗ್ರಾಮದಲ್ಲಿ ಪ್ರೀತಿಸುತ್ತಿದ್ದ ಇಬ್ಬರ ಪ್ರೇಮಿಗಳ ಜಾತಿಗಳು ಬೇರೆ ಬೇರೆಯಾಗಿವೆ. ಆ ಎರಡು ಜಾತಿಗಳ ಮಧ್ಯೆ ಹಲವು ವರ್ಷಗಳಿಂದ ಪರಸ್ಪರ ದ್ವೇಷ ಇತ್ತು ಎನ್ನಲಾಗಿದೆ. ಅದೇ ಕಾರಣಕ್ಕಾಗಿ ಮಗಳು ಕವಿತಾ, ಯುವಕನ ಜೊತೆ ಸಂಬಂಧ ಇದ್ದರೆ ಮರ್ಯಾದೆ ಹೋಗುತ್ತದೆ ಎಂದು ಭಾವಿಸಿ, ತಂದೆ ಸೇರಿದಂತೆ ಸಂಬಂಧಿಗಳು ಕೂಡಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಕಮೀಷನರ್ ಡಾ. ಶರಣಪ್ಪ ಎಸ್.ಡಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...