ಕಲಬುರಗಿ| ಬಿಜೆಪಿ ಜೊತೆಗೂಡಿ ಸರ್ಕಾರ ರಚನೆಗೆ ಡಿಕೆಶಿ ಮುಂದಾಗಿದ್ದರು: ಬಸನಗೌಡ ಪಾಟೀಲ ಯತ್ನಾಳ್

Date:

Share post:

ಕಲಬುರಗಿ: ಡಿಸಿಎಂ ಡಿ.ಕೆ. ಶಿವಕುಮಾ‌ರ್ ಅವರು ಈ ಹಿಂದೆ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿ ಸರ್ಕಾರ ರಚನೆಗೆ ಮುಂದಾಗಿದ್ದರು ಎಂದು ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿ ರಹಸ್ಯ ಸಭೆ ನಡೆದಿತ್ತು. ತಮಗೆ 60ರಿಂದ 70 ಕಾಂಗ್ರೆಸ್ ಶಾಸಕರ ಬೆಂಬಲವಿದೆ ಎಂದು ಡಿಕೆಶಿ ಪರವಾಗಿ ಹೇಳಲಾಗಿತ್ತು. ಹಾಗಾಗಿ ಅಲ್ಲಿನ ಮಾತುಕತೆಯ ಪ್ರಕಾರ ಸಿಎಂ ಹುದ್ದೆ ಡಿ.ಕೆ ಶಿವಕುಮಾ‌ರ್ ಹಾಗೂ ಡಿಸಿಎಂ ಹುದ್ದೆ ವಿಜಯೇಂದ್ರ ಅವರಿಗೆ ನೀಡುವ ನಿರ್ಧಾರ ಮಾಡಲಾಗಿತ್ತು. ಆದರೆ ಡಿಕೆಶಿ ಪರ 12 ರಿಂದ 13 ಶಾಸಕರೂ ಇಲ್ಲ ಎನ್ನುವುದನ್ನು ನಮ್ಮ ಆಂತರಿಕ ವರದಿಯಿಂದ ಗೊತ್ತಾಯಿತು. ಹಾಗಾಗಿ ಅದು ಅಲ್ಲಿಗೆ ನಿಂತು ಹೋಯಿತು ಎಂದರು.

 

ಅಲ್ಲದೆ, ಡಿಕೆಶಿ ಅವರು ಬಿಜೆಪಿ ಜೊತೆಗೆ ಕೈಜೋಡಿಸಿದರೆ ಅಷ್ಟು ಶಾಸಕರೂ ಅವರೊಂದಿಗೆ ಇರುವುದಿಲ್ಲ ಎಂಬ ಮಾತುಗಳೂ ಕೇಳಿಬಂದವು. ಬಹುತೇಕ ಶಾಸಕರು ಸಿದ್ದರಾಮಯ್ಯ ಅವರೊಂದಿಗೆ ಇದ್ದಾರೆ. ಇನ್ನೊಂದೆರಡು ವರ್ಷ ಮುಸ್ಲಿಮರ ಪರ ನಿಲುವುಳ್ಳ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇದ್ದರೂ ಚಿಂತೆ ಇಲ್ಲ. ಡಿ.ಕೆ.ಶಿವಕುಮಾರ್ ಅವರಂತಹ ಭ್ರಷ್ಟರು ಮುಖ್ಯಮಂತ್ರಿಯಾಗಬಾರದು. ಶಿವಕುಮಾ‌ರ್ ಹಾಗೂ ವಿಜಯೇಂದ್ರ ಇಬ್ಬರೂ ಭ್ರಷ್ಟರು. ಇಬ್ಬರೂ ಒಂದಾದರೆ ಕರ್ನಾಟಕವನ್ನೇ ಮಾರಿಬಿಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...