ಕಲಬುರಗಿ| ಬಿಜೆಪಿ ಜೊತೆಗೂಡಿ ಸರ್ಕಾರ ರಚನೆಗೆ ಡಿಕೆಶಿ ಮುಂದಾಗಿದ್ದರು: ಬಸನಗೌಡ ಪಾಟೀಲ ಯತ್ನಾಳ್

Date:

Share post:

ಕಲಬುರಗಿ: ಡಿಸಿಎಂ ಡಿ.ಕೆ. ಶಿವಕುಮಾ‌ರ್ ಅವರು ಈ ಹಿಂದೆ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿ ಸರ್ಕಾರ ರಚನೆಗೆ ಮುಂದಾಗಿದ್ದರು ಎಂದು ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿ ರಹಸ್ಯ ಸಭೆ ನಡೆದಿತ್ತು. ತಮಗೆ 60ರಿಂದ 70 ಕಾಂಗ್ರೆಸ್ ಶಾಸಕರ ಬೆಂಬಲವಿದೆ ಎಂದು ಡಿಕೆಶಿ ಪರವಾಗಿ ಹೇಳಲಾಗಿತ್ತು. ಹಾಗಾಗಿ ಅಲ್ಲಿನ ಮಾತುಕತೆಯ ಪ್ರಕಾರ ಸಿಎಂ ಹುದ್ದೆ ಡಿ.ಕೆ ಶಿವಕುಮಾ‌ರ್ ಹಾಗೂ ಡಿಸಿಎಂ ಹುದ್ದೆ ವಿಜಯೇಂದ್ರ ಅವರಿಗೆ ನೀಡುವ ನಿರ್ಧಾರ ಮಾಡಲಾಗಿತ್ತು. ಆದರೆ ಡಿಕೆಶಿ ಪರ 12 ರಿಂದ 13 ಶಾಸಕರೂ ಇಲ್ಲ ಎನ್ನುವುದನ್ನು ನಮ್ಮ ಆಂತರಿಕ ವರದಿಯಿಂದ ಗೊತ್ತಾಯಿತು. ಹಾಗಾಗಿ ಅದು ಅಲ್ಲಿಗೆ ನಿಂತು ಹೋಯಿತು ಎಂದರು.

 

ಅಲ್ಲದೆ, ಡಿಕೆಶಿ ಅವರು ಬಿಜೆಪಿ ಜೊತೆಗೆ ಕೈಜೋಡಿಸಿದರೆ ಅಷ್ಟು ಶಾಸಕರೂ ಅವರೊಂದಿಗೆ ಇರುವುದಿಲ್ಲ ಎಂಬ ಮಾತುಗಳೂ ಕೇಳಿಬಂದವು. ಬಹುತೇಕ ಶಾಸಕರು ಸಿದ್ದರಾಮಯ್ಯ ಅವರೊಂದಿಗೆ ಇದ್ದಾರೆ. ಇನ್ನೊಂದೆರಡು ವರ್ಷ ಮುಸ್ಲಿಮರ ಪರ ನಿಲುವುಳ್ಳ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇದ್ದರೂ ಚಿಂತೆ ಇಲ್ಲ. ಡಿ.ಕೆ.ಶಿವಕುಮಾರ್ ಅವರಂತಹ ಭ್ರಷ್ಟರು ಮುಖ್ಯಮಂತ್ರಿಯಾಗಬಾರದು. ಶಿವಕುಮಾ‌ರ್ ಹಾಗೂ ವಿಜಯೇಂದ್ರ ಇಬ್ಬರೂ ಭ್ರಷ್ಟರು. ಇಬ್ಬರೂ ಒಂದಾದರೆ ಕರ್ನಾಟಕವನ್ನೇ ಮಾರಿಬಿಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...