ಕಲಬುರಗಿ| ಬೆಳೆ ಹಾನಿಯಾಗಿರುವ ಪ್ರತಿ ಎಕರೆಗೆ 20 ಸಾವಿರ ಪರಿಹಾರಕ್ಕೆ ವೀರ ಕನ್ನಡಿಗರ ಸೇನೆ ಆಗ್ರಹ

Date:

Share post:

ಕಲಬುರಗಿ: ಮಳೆಯಿಂದ ಬೆಳೆ ನಷ್ಟಕ್ಕೆ ತುತ್ತಾಗಿರುವ ರೈತರಿಗೆ ಶೀಘ್ರವೇ ಪ್ರತಿ ಎಕರೆಗೆ 20,000 ಪರಿಹಾರ ನೀಡಬೇಕೆಂದು ಆಗ್ರಹಿಸಿ, ವೀರ ಕನ್ನಡಿಗರ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿ, ಡಿ.ಸಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಅತಿವೃಷ್ಟಿಯಾಗಿ ರೈತರು ಬೆಳೆದಿರುವ ಬೆಳೆಗಳು ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ, ಏನು ಮಾಡಬೇಕೆಂದು ತಿಳಿಯದೆ ರೈತರು ಕಂಗಾಲಾಗಿದ್ದಾರೆ. ಕೂಡಲೇ ಸರ್ಕಾರ ರೈತರ ಪರವಾಗಿ ನಿಂತು ಪರಿಹಾರ ಘೋಷಣೆ ಮಾಡುವಲ್ಲಿ ನಿರತರಾಗಬೇಕೆಂದು ಸಂಘಟನೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

 

ನಮ್ಮ ಪ್ರದೇಶದಲ್ಲಿ ಬೆಳೆದಿರುವ ಹೆಸರು, ಉದ್ದು, ಸಜ್ಜೆ, ಹಾಗೂ ತೊಗರಿ ಬೆಳೆಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಕೊಳೆತು ಹೋಗಿವೆ. ಹೀಗಾಗಿ ಅತಿಯಾದ ಮಳೆಯಿಂದ ಸಂಕಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸಲಿ ಎಂದು ಒತ್ತಾಯಿಸಿದ್ದಾರೆ.

 

ಇದೇ ಸಂಧರ್ಭದಲ್ಲಿ ರಾಜ್ಯಾಧ್ಯಕ್ಷರಾದ ಅಮೃತ ಪಾಟೀಲ ಸಿರನೂರ ಹಾಗೂ ರವಿ ಒಂಟಿ, ವಿಠಲ ಕುಸಾಳೆ, ಉಮೇಶ ಸಿಂಗೆ, ಸೋಮಶೇಖರ ಗಡಿ ನಿಂಗಳಿ, ಗೋಪಾಲರಾವ, ಸಚಿನಕುಮಾರ, ಎಮ್.ಬಿ.ಪಾಟೀಲ,ಹಣಮಂತ ಇಂಜಿಹಳ್ಳಿ, ಅಶೋಕ ಬೀರನಳ್ಳಿ, ವಿಠಲ ಇಂಜಹಳ್ಳಿ, ಮಲ್ಲಿಕಾರ್ಜುನ ಮಠ, ಶಿವಾನಂದ ಚಿಕ್ಕಾಣಿ, ಪ್ರಶಾಂತ ಬಾಚನಳ್ಳಿ, ಅಣವೀರ ಬಿರಾದಾರ, ಸುಧೀರ ನವನಳ್ಳಿ, ಮಾಂತಗೌಡ ಹುಗಾರ, ಮಂಜುನಾಥ, ಲಕ್ಷ್ಮೀಕಾಂತ ಸಿಮನರಾಜ, ಹಣಮಂತ ಭಜಂತ್ರಿ, ಉದಯಕುಮಾರ, ಶ್ರವಣಕುಮಾರ, ಮಲ್ಲಿನಾಥ, ಸೋಮಾ, ಭಾಗಮ್ಮ ಚೌಧರಿ ಸೇರಿದಂತೆ ಮತ್ತಿತರರು ಇದ್ದರು

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...