ಕಲಬುರಗಿ| ರಾಷ್ಟ್ರಪತಿಗಳಿಂದ ರಾಷ್ಟ್ರೀಯ ಶಿಕ್ಷಕಿ ಪ್ರಶಸ್ತಿ ಸ್ವೀಕರಿಸಿದ ಡಾ. ಶ್ರೀದೇವಿ ಕಲ್ಯಾಣ್

Date:

Share post:

ಕಲಬುರಗಿ: ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ, ಉನ್ನತ ಶಿಕ್ಷಣ ಇಲಾಖೆಯು ನೀಡುವ 2025ರ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕಲಬುರಗಿಯಿಂದ ಆಯ್ಕೆಯಾಗಿರುವ ಡಾ. ಶ್ರೀದೇವಿ ಕಲ್ಯಾಣ್ ಅವರಿಗೆ ಪ್ರದಾನ ಮಾಡಿದರು.

ಸದ್ಯ ನಗರದ ಶರಣಬಸವ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದಲ್ಲಿ ಗಣಿತಶಾಸ್ತ್ರದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅವರು 2025ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕಿಯಾಗಿ ಆಯ್ಕೆಯಾಗಿದ್ದರು. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದಿರುವ ಕಾರ್ಯಕ್ರಮದಲ್ಲಿ ಅವರಿಗೆ 50,000 ರೂ. ನಗದು ಮತ್ತು ಬೆಳ್ಳಿ ಪದಕವನ್ನು ಹೊಂದಿರುವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಈ ವೇಳೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಇದ್ದರು.

ಕರ್ನಾಟಕದಿಂದ ಶ್ರೀದೇವಿ ಸೇರಿದಂತೆ ಉಡುಪಿಯ ಮಣಿಪಾಲ ತಂತ್ರಜ್ಞಾನ ಸಂಸ್ಥೆಯ ಡಾ. ಶೋಭಾ ಎಂ. ಇ. ಮತ್ತು ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನ ಪ್ರೊ. ಶ್ರೀವರ್ಧಿನಿ ಕೇಶವಮೂರ್ತಿ ಝಾ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...