ಕಲಬುರಗಿ| ಡಾ.ಶರಣಬಸವಪ್ಪ ಅಪ್ಪ ವಿಧಿವಶ; ಕುಟುಂಬಕ್ಕೆ ಭೇಟಿ ನೀಡಿ, ಮಲ್ಲಿಕಾರ್ಜುನ ಖರ್ಗೆ ಸಾಂತ್ವನ

Date:

Share post:

ಕಲಬುರಗಿ: ಇತ್ತೀಚಿಗೆ ಲಿಂಗೈಕ್ಯರಾದ ಶರಣಬಸವೇಶ್ವರ ಸಂಸ್ಥಾನದ 8ನೆಯ ಪೀಠಾಧಿಪತಿಗಳಾಗಿದ್ದ ಡಾ.ಪೂಜ್ಯ ಶ್ರೀ ಶರಣಬಸವಪ್ಪ ಅಪ್ಪಾಜೀ‌ ಅವರ ಕುಟುಂಬ ವರ್ಗದವನ್ನು ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆ ವಿರೋಧ ಪಕ್ಷದ ‌ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.

 

ಡಾ. ಅಪ್ಪಾಜೀ ಅವರ ಶೈಕ್ಷಣಿಕ ಕ್ಷೇತ್ರದ ಕೊಡುಗೆಯನ್ನು ಸ್ಮರಿಸಿದ ಖರ್ಗೆ ಅವರು, ಹೈದರಾಬಾದ್ ಕರ್ನಾಟಕದದಂತ ಹಿಂದುಳಿದ ಪ್ರದೇಶದಲ್ಲಿ ಅಕ್ಷರ ಕ್ರಾಂತಿಯ ಜೊತೆಗೆ ಶ್ರೀ ಸಂಸ್ಥಾನದ ಮಹತ್ತರ ಕೊಡುಗೆಯಾದ ದಾಸೋಹವನ್ನು ದಶಕಗಳ ಕಾಲ ಮುಂದುವರೆಸಿಕೊಂಡು ಬಂದಿದ್ದರು ಎಂದು ಸ್ಮರಿಸಿದರು.

ಡಾ‌.ಅಪ್ಪಾಜೀ ಅವರ ಸುಪುತ್ರ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರನ್ನು ತಮ್ಮ ಪಕ್ಕದಲ್ಲಿ ಕುಳ್ಳಿರಿಸಿಕೊಂಡು ಆತ್ಮೀಯವಾಗಿ ಮಾತನಾಡಿಸಿದರು.

ಈ ಸಂದರ್ಭದಲ್ಲಿ ಸಂಸ್ಥಾನದ ನೂತನ ಅಧ್ಯಕ್ಷರಾದ ದಾಕ್ಷಾಯಿಣಿ ಅವ್ವಾಜೀ, ರಾಧಾಬಾಯಿ ಖರ್ಗೆ, ಸಚಿವ ಶರಣಬಸಪ್ಪ ದರ್ಶನಾಪುರ ಸೇರಿದಂತೆ ಹಲವರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...