ಕಲಬುರಗಿ| ಬಿಜೆಪಿಗರು ತಮ್ಮ ಮಕ್ಕಳನ್ನು ವಾಪಸ್ ಕರೆಸಿ, ಮದ್ದೂರು ಚಲೋ ಮಾಡಲಿ: ಪ್ರಿಯಾಂಕ್ ಖರ್ಗೆ ಸವಾಲ್

Date:

Share post:

ಕಲಬುರಗಿ: ಮದ್ದೂರು ಚಲೋ‌ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ದ ತೀವ್ರ ವಾಗ್ಧಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ವಿದೇಶದಲ್ಲಿರುವ ತಮ್ಮ ತಮ್ಮ ಮಕ್ಕಳನ್ನು ವಾಪಸ್ ಕರೆಸಿ ಮದ್ದೂರಿನ ಬೀದಿಗಿಳಿಸಲಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ನಾಯಕರು ಈಗ ಮಂಗಳೂರಿನಿಂದ ಮದ್ದೂರಿಗೆ ಶಿಫ್ಟ್ ಆಗಿದ್ದಾರೆ ಎಂದು ಟೀಕಿಸಿದ ಸಚಿವರು ಅವರಿಗೆ ಈಗ ಮಾಡಲು ಏನೂ ಕೆಲಸವಿಲ್ಲ. ಹಾಗಾಗಿ ಇದೆಲ್ಲ ಮಾಡುತ್ತಿದ್ದಾರೆ. ಮದ್ದೂರು ಘಟನೆಗೆ ಸಂಬಂಧಿಸಿದಂತೆ 22 ಜನರನ್ನು ಅರೆಸ್ಟ್ ಮಾಡಲಾಗಿದೆ. ತನಿಖೆ ನಡೆಯುತ್ತಿದೆ. ಶಾಂತಿ ಸಭೆ ಕರೆಯಲಾಗಿತ್ತು. ಆ ಸಭೆಯಲ್ಲಿ ಯಾಕೆ‌ ಬಿಜೆಪಿ ನಾಯಕರು ಭಾಗವಹಿಸಲಿಲ್ಲ ? ಎಂದು ಪ್ರಶ್ನಿಸಿದರು.

ಭದ್ರಾವತಿ ಶಾಸಕ ಸಂಗಮೇಶ್ ಹೇಳಿಕೆ‌ 20 ವರ್ಷ ಹಿಂದಿನದು ಎಂದು ಅವರೇ ಹೇಳಿದ್ದಾರೆ. ಸಂಗಮೇಶ್ ಬಗ್ಗೆ ಮಾತಮಾಡುವ ಬಿಜೆಪಿ ನಾಯಕರು ಈ ಹಿಂದೆ ಇದೇ ತರ ಹೇಳಿಕೆ ನೀಡಿದ್ದ ದೇವೇಗೌಡ ಹಾಗೂ ಕುಮಾರಸ್ವಾಮಿ ಬಗ್ಗೆ ಏನು ಹೇಳುತ್ತಾರೆ ಎಂದು ತಿರುಗೇಟು ನೀಡಿದರು.

ಕಡಗಂಚಿಯ ಕೇಂದ್ರೀಯ ವಿದ್ಯಾಲಯ ಆರ್ ಎಸ್ ಎಸ್ ಶಾಖಾ ಕಚೇರಿಯಾಗಿದೆ. ವಿವಿ ಕಟ್ಟಲು ಜಾಗ ಕೊಟ್ಟಿರುವುದು ನಾವು, ಆದರೆ, ನಮ್ಮನ್ನೇ ವಿವಿ ವ್ಯಾಪ್ತಿಯಿಂದ ಹೊರಗಡೆ ಇಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Share post:

spot_imgspot_img

Popular

More like this
Related

ಕಲಬುರಗಿ: ಮಿಣಜಗಿಯಲ್ಲಿ ಹೊಸ ಕಟ್ಟಡಗಳ ಲೋಕಾರ್ಪಣೆ

ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ...

ಕಲಬುರಗಿ| ಫೆ.12 ರಿಂದ ಡಿ.ಇ.ಸಿ. ಸಾಮೂಹಿಕ ಗುಳಿಗೆ ನುಂಗಿಸುವ ಕಾರ್ಯಕ್ರಮ: ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ

ಕಲಬುರಗಿ: ಆನೆಕಾಲು ರೋಗ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇದೇ ಫೆಬ್ರವರಿ 12...

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...