ಕಲಬುರಗಿ- ಬೆಂಗಳೂರು ವಿಮಾನ ಸಂಚಾರಕ್ಕೆ ಸಂಸದ ರಾಧಾಕೃಷ್ಣ ದೊಡ್ಡಮನಿ ಒತ್ತಾಯ

Date:

Share post:

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ತಕ್ಷಣ ವಿಮಾನ ಸಂಚಾರ ಪುನಃ ಆರಂಭಿಸುವಂತೆ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜಾರಪು ಅವರನ್ನು ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದರು ಕಲಬುರಗಿಯಿಂದ ಬೆಂಗಳೂರಿಗೆ ವಿಮಾನ ಸಂಚಾರ ಪುನಃ ಆರಂಭಿಸುವುದು ಅವಶ್ಯಕವಾಗಿರುವ ಬಗ್ಗೆ ಮನವರಿಕೆ ಮಾಡಿದರು.

ಸ್ಟಾರ್ ಏರ್ ಲೈನ್ಸ್ ಸಂಸ್ಥೆ ಕಲಬುರಗಿ ಯಿಂದ ತನ್ನ ವಿಮಾನಯಾನ ಕಾರ್ಯಚರಣೆಯನ್ನು ಸ್ಥಗಿತಗೊಳಿಸಿದೆ. ಇದರಿಂದ‌ ಕಲಬುರಗಿ ಅಷ್ಟೇ ಅಲ್ಲದೇ ಸುತ್ತಮುತ್ತಲಿನ ಭಾಗಗಳ ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ತೊಂದರೆಯಾಗಿದೆ ಎಂದು ರಾಧಾಕೃಷ್ಣ ದೊಡ್ಡಮನಿ ಅವರು ಒತ್ತಿ ಹೇಳಿದರು.

ಕಲಬುರಗಿಯು ಕಲ್ಯಾಣ ಕರ್ನಾಟಕದ ಪ್ರಮುಖ ವ್ಯಾಣಿಜ್ಯ ಕೇಂದ್ರವಾಗಿದ್ದು, ಅದರ ಜೊತೆಗೆ ವಿಭಾಗೀಯ ಕೇಂದ್ರವಾಗಿದೆ. ಜಿಲ್ಲೆಯಲ್ಲಿ ಕೇಂದ್ರೀಯ ವಿವಿ ಸೇರಿದಂತೆ ನಾಲ್ಕು ವಿವಿಗಳಿದ್ದು, ಪ್ರಮುಖ ಶಿಕ್ಷಣ ಸಂಸ್ಥೆಗಳಿವೆ. ಸಾರ್ವಜನಿಕರು ಬೆಂಗಳೂರಿನೊಂದಿಗೆ ವ್ಯಾಪಾರ ಉದ್ಯೋಗ ಸೇರಿದಂತೆ ಶೈಕ್ಷಣಿಕ ಅವಶ್ಯಕತೆಗಳಿಗೆ ನಿರಂತರವಾಗಿ ಪ್ರಯಾಣ ಮಾಡುತ್ತಿದ್ದು, ಇದೀಗ ವಿಮಾನ ಸಂಚಾರ ಸ್ಥಗಿತಗೊಂಡಿದ್ದರಿಂದ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಕಲಬುರಗಿ ಯಿಂದ ಬೆಂಗಳೂರಿಗೆ ವಿಮಾನ ಸಂಚಾರ ಪುನಃ ಆರಂಭಿಸುವಂತೆ ಸಚಿವರಿಗೆ ಒತ್ತಾಯಿಸಿದರು.

ಕಲಬುರಗಿಯಿಂದ ಮುಂಬೈ ಹಾಗೂ ನವದೆಹಲಿ ವಿಮಾನ ಸಂಚಾರ ಪ್ರಾರಂಭಿಸುವಂತೆ ಇದೇ ಸಂದರ್ಭದಲ್ಲಿ ಸಂಸದರು ವಿಮಾನಯಾನ ಸಚಿವರನ್ನು ಕೋರಿದರು.

ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮೊಬೈಲ್ ಮೂಲಕ ಮಾತನಾಡಿ ವಿಮಾನಯಾನ ಪುನಃ ಆರಂಭಿಸುವ ಕುರಿತು ಕೂಡಲೇ ಕ್ರಮವಹಿಸುವಂತೆ ಸೂಚಿಸಿದರು. ನಂತರ, ಸಂಸದರೊಂದಿಗೆ ಮಾತನಾಡಿದ ಸಚಿವರು, ದೆಹಲಿಗೆ ವಾಪಸ್ ತೆರಳಿದ ನಂತರ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಯಚೂರು ಸಂಸದರಾದ ಜಿ. ಕುಮಾರ ನಾಯಕ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...