ಕಲಬುರಗಿ- ಬೆಂಗಳೂರು ವಿಮಾನ ಸಂಚಾರಕ್ಕೆ ಸಂಸದ ರಾಧಾಕೃಷ್ಣ ದೊಡ್ಡಮನಿ ಒತ್ತಾಯ

Date:

Share post:

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ತಕ್ಷಣ ವಿಮಾನ ಸಂಚಾರ ಪುನಃ ಆರಂಭಿಸುವಂತೆ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜಾರಪು ಅವರನ್ನು ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದರು ಕಲಬುರಗಿಯಿಂದ ಬೆಂಗಳೂರಿಗೆ ವಿಮಾನ ಸಂಚಾರ ಪುನಃ ಆರಂಭಿಸುವುದು ಅವಶ್ಯಕವಾಗಿರುವ ಬಗ್ಗೆ ಮನವರಿಕೆ ಮಾಡಿದರು.

ಸ್ಟಾರ್ ಏರ್ ಲೈನ್ಸ್ ಸಂಸ್ಥೆ ಕಲಬುರಗಿ ಯಿಂದ ತನ್ನ ವಿಮಾನಯಾನ ಕಾರ್ಯಚರಣೆಯನ್ನು ಸ್ಥಗಿತಗೊಳಿಸಿದೆ. ಇದರಿಂದ‌ ಕಲಬುರಗಿ ಅಷ್ಟೇ ಅಲ್ಲದೇ ಸುತ್ತಮುತ್ತಲಿನ ಭಾಗಗಳ ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ತೊಂದರೆಯಾಗಿದೆ ಎಂದು ರಾಧಾಕೃಷ್ಣ ದೊಡ್ಡಮನಿ ಅವರು ಒತ್ತಿ ಹೇಳಿದರು.

ಕಲಬುರಗಿಯು ಕಲ್ಯಾಣ ಕರ್ನಾಟಕದ ಪ್ರಮುಖ ವ್ಯಾಣಿಜ್ಯ ಕೇಂದ್ರವಾಗಿದ್ದು, ಅದರ ಜೊತೆಗೆ ವಿಭಾಗೀಯ ಕೇಂದ್ರವಾಗಿದೆ. ಜಿಲ್ಲೆಯಲ್ಲಿ ಕೇಂದ್ರೀಯ ವಿವಿ ಸೇರಿದಂತೆ ನಾಲ್ಕು ವಿವಿಗಳಿದ್ದು, ಪ್ರಮುಖ ಶಿಕ್ಷಣ ಸಂಸ್ಥೆಗಳಿವೆ. ಸಾರ್ವಜನಿಕರು ಬೆಂಗಳೂರಿನೊಂದಿಗೆ ವ್ಯಾಪಾರ ಉದ್ಯೋಗ ಸೇರಿದಂತೆ ಶೈಕ್ಷಣಿಕ ಅವಶ್ಯಕತೆಗಳಿಗೆ ನಿರಂತರವಾಗಿ ಪ್ರಯಾಣ ಮಾಡುತ್ತಿದ್ದು, ಇದೀಗ ವಿಮಾನ ಸಂಚಾರ ಸ್ಥಗಿತಗೊಂಡಿದ್ದರಿಂದ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಕಲಬುರಗಿ ಯಿಂದ ಬೆಂಗಳೂರಿಗೆ ವಿಮಾನ ಸಂಚಾರ ಪುನಃ ಆರಂಭಿಸುವಂತೆ ಸಚಿವರಿಗೆ ಒತ್ತಾಯಿಸಿದರು.

ಕಲಬುರಗಿಯಿಂದ ಮುಂಬೈ ಹಾಗೂ ನವದೆಹಲಿ ವಿಮಾನ ಸಂಚಾರ ಪ್ರಾರಂಭಿಸುವಂತೆ ಇದೇ ಸಂದರ್ಭದಲ್ಲಿ ಸಂಸದರು ವಿಮಾನಯಾನ ಸಚಿವರನ್ನು ಕೋರಿದರು.

ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮೊಬೈಲ್ ಮೂಲಕ ಮಾತನಾಡಿ ವಿಮಾನಯಾನ ಪುನಃ ಆರಂಭಿಸುವ ಕುರಿತು ಕೂಡಲೇ ಕ್ರಮವಹಿಸುವಂತೆ ಸೂಚಿಸಿದರು. ನಂತರ, ಸಂಸದರೊಂದಿಗೆ ಮಾತನಾಡಿದ ಸಚಿವರು, ದೆಹಲಿಗೆ ವಾಪಸ್ ತೆರಳಿದ ನಂತರ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಯಚೂರು ಸಂಸದರಾದ ಜಿ. ಕುಮಾರ ನಾಯಕ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...