ಕಲಬುರಗಿ| ಐತಿಹಾಸಿಕ ಸನ್ನತಿ- ಕನಗನಹಳ್ಳಿ ಅಭಿವೃದ್ದಿಗಾಗಿ ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಭೆ

Date:

Share post:

ಕಲಬುರಗಿ: ಐತಿಹಾಸಿಕ ಸನ್ನತಿ- ಕನಗನಹಳ್ಳಿ ಅಭಿವೃದ್ದಿಗಾಗಿ ಜಿಲ್ಲಾಡಳಿತ ಮತ್ತು ನಿರ್ಮಾಣ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅತಿ ಶೀಘ್ರದಲ್ಲಿ ಡಿಪಿಆರ್ ತಯಾರಿಸಿ, ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲು ಬೇಕಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಸಚಿವರು‌ ಜಗತ್ತಿಗೆ ಅಹಿಂಸೆ, ಶಾಂತಿ ಮತ್ತು ಮಾನವೀಯತೆಯ ಬೆಳಕು ತೋರಿದ ಬೌದ್ಧ ಧರ್ಮದ ದಾರ್ಶನಿಕತೆಯು ಕರ್ನಾಟಕದಲ್ಲಿಯೂ ಅತ್ಯಂತ ಪ್ರಭಾವಿಯಾಗಿತ್ತು.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರವು ಬೌದ್ಧ ಚಿಂತನೆಗಳ ಶ್ರೀಮಂತ ಪರಂಪರೆಯ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿತ್ತು ಎನ್ನುವುದು ನಮ್ಮೆಲ್ಲರನ್ನು ರೋಮಾಂಚನಗೊಳಿಸುವ ಸಂಗತಿ.

ಸಾಮ್ರಾಟ್ ಅಶೋಕನ ಕಾಲಮಾನದಲ್ಲಿ ನಿರ್ಮಾಣವಾಗಿರುವ ಮಹಾಚೈತ್ಯ ಎಂದು ಕರೆಸಿಕೊಳ್ಳುವ ಸನ್ನತಿ-ಕನಗನಹಳ್ಳಿ ಸ್ತೂಪ ನಮ್ಮ ಹೆಮ್ಮೆಯ ಚರಿತ್ರೆಯ ಹೆಗ್ಗುರುತುಗಳಲ್ಲಿ ಒಂದು. ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿರುವ ಕನಗನಹಳ್ಳಿಯ ಬೌದ್ಧ ತಾಣದ ಹಿಂದಿನ ವೈಭವವನ್ನು ಮರುಸ್ಥಾಪಿಸುವ ಪ್ರಯತ್ನ ನಮ್ಮದು ಎಂದು ಹೇಳಿ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...