ಕಲಬುರಗಿ| ಐತಿಹಾಸಿಕ ಸನ್ನತಿ- ಕನಗನಹಳ್ಳಿ ಅಭಿವೃದ್ದಿಗಾಗಿ ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಭೆ

Date:

Share post:

ಕಲಬುರಗಿ: ಐತಿಹಾಸಿಕ ಸನ್ನತಿ- ಕನಗನಹಳ್ಳಿ ಅಭಿವೃದ್ದಿಗಾಗಿ ಜಿಲ್ಲಾಡಳಿತ ಮತ್ತು ನಿರ್ಮಾಣ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅತಿ ಶೀಘ್ರದಲ್ಲಿ ಡಿಪಿಆರ್ ತಯಾರಿಸಿ, ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲು ಬೇಕಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಸಚಿವರು‌ ಜಗತ್ತಿಗೆ ಅಹಿಂಸೆ, ಶಾಂತಿ ಮತ್ತು ಮಾನವೀಯತೆಯ ಬೆಳಕು ತೋರಿದ ಬೌದ್ಧ ಧರ್ಮದ ದಾರ್ಶನಿಕತೆಯು ಕರ್ನಾಟಕದಲ್ಲಿಯೂ ಅತ್ಯಂತ ಪ್ರಭಾವಿಯಾಗಿತ್ತು.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರವು ಬೌದ್ಧ ಚಿಂತನೆಗಳ ಶ್ರೀಮಂತ ಪರಂಪರೆಯ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿತ್ತು ಎನ್ನುವುದು ನಮ್ಮೆಲ್ಲರನ್ನು ರೋಮಾಂಚನಗೊಳಿಸುವ ಸಂಗತಿ.

ಸಾಮ್ರಾಟ್ ಅಶೋಕನ ಕಾಲಮಾನದಲ್ಲಿ ನಿರ್ಮಾಣವಾಗಿರುವ ಮಹಾಚೈತ್ಯ ಎಂದು ಕರೆಸಿಕೊಳ್ಳುವ ಸನ್ನತಿ-ಕನಗನಹಳ್ಳಿ ಸ್ತೂಪ ನಮ್ಮ ಹೆಮ್ಮೆಯ ಚರಿತ್ರೆಯ ಹೆಗ್ಗುರುತುಗಳಲ್ಲಿ ಒಂದು. ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿರುವ ಕನಗನಹಳ್ಳಿಯ ಬೌದ್ಧ ತಾಣದ ಹಿಂದಿನ ವೈಭವವನ್ನು ಮರುಸ್ಥಾಪಿಸುವ ಪ್ರಯತ್ನ ನಮ್ಮದು ಎಂದು ಹೇಳಿ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...