ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ

Date:

Share post:

ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ ಕೆ. ಹೆಚ್. ಬಿ. ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ರಾತ್ರಿ ದೇಶ ಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಯಿತು.

ಮಕ್ಕಳಿಗಾಗಿ ದೇಶ ಭಕ್ತಿಗೀತೆ, ನೃತ್ಯ, ಗಾಯನ ಸ್ಪರ್ಧೆ ಗಳನ್ನ ಏರ್ಪಡಿಸಿ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ದೇಶ ಸೇವೆ ಮಾಡಿ ನಿವೃತ್ತರಾದ ಸೈನಿಕರಿಗೆ, ಜಿಲ್ಲಾ ಮತ್ತು ತಾಲೂಕ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕ-ಶಿಕ್ಷಕಿ ಯರಿಗೆ ಮತ್ತು ವಿವಿಧ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ನೌಕರರಿಗೆ ಸನ್ಮಾನಿಸಲಾಯಿತು.

ಕೆ. ಹೆಚ್. ಬಿ. ನಿವಾಸಿಗಳ ಕ್ಷೇಮ ಅಭಿವೃದ್ಧಿ ಸಂಘದ ಅಧ್ಯಕ್ಷ ಸಂಜು ಶೆಟ್ಟಿ ಮಾತಾಡಿ, ಕಾಲೋನಿಯ ಸ್ವಚ್ಛತೆ ಕಾಪಾಡಬೇಕು, ಕಾಲೋನಿಯ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಸಿಗುವ ನಿಟ್ಟಿನಲ್ಲಿ ಪಾಲಕರು ಗಮನ ಹರಿಸಬೇಕು ಮತ್ತು ನಾವೆಲ್ಲ ಜಾತಿ, ಮತ, ಧರ್ಮಗಳ ಭೇದ ಭಾವ ಮರೆತು ಸಮಾಜದ ಒಳಿತಿಗಾಗಿ ಒಂದಾಗಿ ಮುಂದಿನ ಪೀಳಿಗೆಗೆ ಉತ್ತಮ ಸಮಾಜ ನಿರ್ಮಾಣ ಮಾಡಬೇಕೆಂದು ಅಭಿಪ್ರಾಯಪಟ್ಟರು.

ಕಾಲೋನಿಯ ಉಪಾಧ್ಯಕ್ಷರಾದ ಬಾಲಕೃಷ್ಣ ಕುಲಕರ್ಣಿ, ಹಣಮಂತರಾಯ, ವಿನೋದ, ಟೈಗರ್, ಸಿದ್ರಾಮಪ್ಪ, ವಿರೇಶ್ ಬೋಳಶೆಟ್ಟಿ, ಇನ್ನಿತರ ಸಂಘದ ಪದಾಧಿಕಾರಿಗಳು ಮತ್ತು ಕಾಲೋನಿಯ ನಿವಾಸಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...