ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ

Date:

Share post:

ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ ಕೆ. ಹೆಚ್. ಬಿ. ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ರಾತ್ರಿ ದೇಶ ಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಯಿತು.

ಮಕ್ಕಳಿಗಾಗಿ ದೇಶ ಭಕ್ತಿಗೀತೆ, ನೃತ್ಯ, ಗಾಯನ ಸ್ಪರ್ಧೆ ಗಳನ್ನ ಏರ್ಪಡಿಸಿ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ದೇಶ ಸೇವೆ ಮಾಡಿ ನಿವೃತ್ತರಾದ ಸೈನಿಕರಿಗೆ, ಜಿಲ್ಲಾ ಮತ್ತು ತಾಲೂಕ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕ-ಶಿಕ್ಷಕಿ ಯರಿಗೆ ಮತ್ತು ವಿವಿಧ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ನೌಕರರಿಗೆ ಸನ್ಮಾನಿಸಲಾಯಿತು.

ಕೆ. ಹೆಚ್. ಬಿ. ನಿವಾಸಿಗಳ ಕ್ಷೇಮ ಅಭಿವೃದ್ಧಿ ಸಂಘದ ಅಧ್ಯಕ್ಷ ಸಂಜು ಶೆಟ್ಟಿ ಮಾತಾಡಿ, ಕಾಲೋನಿಯ ಸ್ವಚ್ಛತೆ ಕಾಪಾಡಬೇಕು, ಕಾಲೋನಿಯ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಸಿಗುವ ನಿಟ್ಟಿನಲ್ಲಿ ಪಾಲಕರು ಗಮನ ಹರಿಸಬೇಕು ಮತ್ತು ನಾವೆಲ್ಲ ಜಾತಿ, ಮತ, ಧರ್ಮಗಳ ಭೇದ ಭಾವ ಮರೆತು ಸಮಾಜದ ಒಳಿತಿಗಾಗಿ ಒಂದಾಗಿ ಮುಂದಿನ ಪೀಳಿಗೆಗೆ ಉತ್ತಮ ಸಮಾಜ ನಿರ್ಮಾಣ ಮಾಡಬೇಕೆಂದು ಅಭಿಪ್ರಾಯಪಟ್ಟರು.

ಕಾಲೋನಿಯ ಉಪಾಧ್ಯಕ್ಷರಾದ ಬಾಲಕೃಷ್ಣ ಕುಲಕರ್ಣಿ, ಹಣಮಂತರಾಯ, ವಿನೋದ, ಟೈಗರ್, ಸಿದ್ರಾಮಪ್ಪ, ವಿರೇಶ್ ಬೋಳಶೆಟ್ಟಿ, ಇನ್ನಿತರ ಸಂಘದ ಪದಾಧಿಕಾರಿಗಳು ಮತ್ತು ಕಾಲೋನಿಯ ನಿವಾಸಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...