ಕಲಬುರಗಿ: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಸಮೀಪದ ಧನಸಿಂಗ್ ನಾಯಕ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮಹೇಶ ಕಿಶನ್ ಚವ್ಹಾಣ (22) ಮೃತ ಯುವಕ ಎಂದು ತಿಳಿದುಬಂದಿದೆ. ಹೊಲದಲ್ಲಿ ಕೆಲಸ ಮಾಡುವಾಗ ಬಡಿದ ಸಿಡಿಲಿಗೆ ಯುವಕ ಮೃತಪಟ್ಟಿದ್ದಾನೆ.
ಶಾಲಾಬಾಯಿ-ಕಿಶನ್ ದಂಪತಿಗೆ ನಾಲ್ವರು ಮಕ್ಕಳಿದ್ದು, ಇವರ ಪೈಕಿ ಮೂವರು ವಿದ್ಯಾಭ್ಯಾಸ ಮಾಡುತ್ತಿದ್ದರೆ, ಕುಟುಂಬಕ್ಕೆ ಆಸರೆಯಾಗಿ ಒಕ್ಕಲುತನ ಮಾಡಿಕೊಂಡಿದ್ದ ದ್ವಿತೀಯ ಪುತ್ರ ಮಹೇಶ ಸಿಡಿಲು ಬಡಿದು ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಕುಂಚಾವರಂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


