ಕಲಬುರಗಿ: ಸಿಡಿಲು ಬಡಿದು ಯುವಕ ಬಲಿ

Date:

Share post:

ಕಲಬುರಗಿ: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಸಮೀಪದ ಧನಸಿಂಗ್‌ ನಾಯಕ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಮಹೇಶ ಕಿಶನ್ ಚವ್ಹಾಣ (22) ಮೃತ ಯುವಕ ಎಂದು ತಿಳಿದುಬಂದಿದೆ. ಹೊಲದಲ್ಲಿ ಕೆಲಸ ಮಾಡುವಾಗ ಬಡಿದ ಸಿಡಿಲಿಗೆ ಯುವಕ ಮೃತಪಟ್ಟಿದ್ದಾನೆ.

ಶಾಲಾಬಾಯಿ-ಕಿಶನ್ ದಂಪತಿಗೆ ನಾಲ್ವರು ಮಕ್ಕಳಿದ್ದು, ಇವರ ಪೈಕಿ ಮೂವರು ವಿದ್ಯಾಭ್ಯಾಸ ಮಾಡುತ್ತಿದ್ದರೆ, ಕುಟುಂಬಕ್ಕೆ ಆಸರೆಯಾಗಿ ಒಕ್ಕಲುತನ ಮಾಡಿಕೊಂಡಿದ್ದ ದ್ವಿತೀಯ ಪುತ್ರ ಮಹೇಶ ಸಿಡಿಲು ಬಡಿದು ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಕುಂಚಾವರಂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...