ಸಂಸದ​ ಜಾಧವ್ ಬೆಂಬಲಿಗನ ಭೀಕರ ಕೊಲೆ

Date:

Share post:

ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅವರ ಬೆಂಬಲಿಗ ಬಿಜೆಪಿ ಯುವ ಮುಖಂಡರೊಬ್ಬರನ್ನು ಹತ್ಯೆ ಮಾಡಿರುವ ಘಟನೆ ಅಫಜಲ್ಪುರದ ಸಾಗನೂರು ಗ್ರಾಮದಲ್ಲಿ ನಡೆದಿದೆ. ಗಿರೀಶ್ ಚಕ್ರ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಕೆಲ ದಿನಗಳ ಹಿಂದೆ ಸಂಸದ ಜಾಧವ್ ಆತನನ್ನು BSNL ಸಲಹಾ ಸಮಿತಿ ನಿರ್ದೇಶಕರನ್ನಾಗಿ ಮಾಡಿದ್ದರು.

ಈ ನೇಮಕಾತಿ ನಡೆದ ನಾಲ್ಕು ದಿನಗಳಲ್ಲೇ ಆತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಿರೀಶ್ ಚಕ್ರ ಎಂಬಾತನಿಗೆ ಪಾರ್ಟಿ ಕೊಡಿಸುವುದಾಗಿ ನಂಬಿಸಿದ ಆತನ ಗೆಳೆಯರು ಜಮೀನಿಗೆಕರೆದುಕೊಂಡು ಹೋಗಿದ್ದಾರೆ. ಆ ವೇಳೆ ಗೆಳಯರೆಲ್ಲರೂ ಸೇರಿಕೊಂಡು ಗಿರೀಶ್ ಕಣ್ಣಿಗೆ ಖಾರದ ಪುಡಿ ಎರೆಚಿ ಮಾರಕಾಸ್ತ್ರಗಳಿಂದ ಕೊಚ್ಚಿದ್ದಾರೆ. ತೀವ್ರ ಹಲ್ಲೆ ನಡೆಸಿದ್ದರಿಂದ ಗಿರೀಶ್ ಮೃತಪಟ್ಟಿದ್ದಾನೆ. ಸದ್ಯ ಸ್ಥಳಕ್ಕೆ ಗಂಗಾಪುರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆಂದು ವರದಿಯಾಗಿದೆ.

ಸಂಸದ ಡಾ. ಉಮೇಶ್ ಜಾಧವ್ ಜತೆ ಗಿರೀಶ್ 

ಈ ಸುದ್ದಿಗೆ ಪ್ರತಿಕ್ರಿಯಿಸಿದ ಸಂಸದ ಜಾಧವ್, ಗಿರೀಶ್ ಕೊಲೆಯಾಗಿರುವುದು ತಿಳಿದು ನನಗೆ ಭಾರೀ ಆಘಾತವಾಗಿದೆ. ಆತ ನನ್ನ ಕಟ್ಟಾ ಬೆಂಬಲಿಗನಾಗಿದ್ದ ಎಂದು ಭಾವುಕರಾಗಿದ್ದಾರೆ.

ನಟ, ಮಾಜಿ IAS ಅಧಿಕಾರಿ ಕೆ. ಶಿವರಾಮ್ ನಿಧನ.. ಅವರ ಸಾಧನೆಗಳೇನು ಗೊತ್ತಾ?

ನಿನ್ನೆಯಷ್ಟೇ ಆಳಂದ ತಾಲೂಕಿನ ಸರಸಂಬಾದಲ್ಲಿ ಬಿಜೆಪಿ ಮುಖಂಡನೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಆ ಸುದ್ದಿ ಮಾಸುವ ಮುನ್ನವೇ ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆಯಾಗಿರುವುದು ಜನರಿಗೆ ಬೆಚ್ಚಿಬೀಳಿಸುವಂತೆ ಮಾಡಿದೆ.

ಎರಡೇ ದಿನಗಳಲ್ಲಿ ಬಿಜೆಪಿ ಮುಖಂಡರ ಹತ್ಯೆ ನಡೆದಿರುವುದಕ್ಕೆ ರಾಜಕೀಯ ವಲಯದಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ.

 

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...