ರತನ್ ಟಾಟಾ ನಿಧನ: ಯುವಕರಿಂದ ಕ್ಯಾಂಡಲ್ ಮಾರ್ಚ್

Date:

Share post:

ಕಲಬುರಗಿ: ದೇಶದ ಖ್ಯಾತ ಉದ್ಯಮಿ, ಪದ್ಮವಿಭೂಷಣ ರತನ್ ಟಾಟಾ ಅವರ ನಿಧನರಾಗಿದ್ದರಿಂದ ನಗರದ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದ ಬಳಿ ನೂರಾರು ಯುವಕರು ಸೇರಿಕೊಂಡು ಕ್ಯಾಂಡಲ್ ಮಾರ್ಚ್ ಮೂಲಕ ಅಂತಿಮ ನಮನ ಸಲ್ಲಿಸಿದರು.

ಅಧಿಕ ಸಂಖ್ಯೆಯಲ್ಲಿ ಯುವಕರು ಸೇರಿದಂತೆ ನೂರಾರು ಅಭಿಮಾನಿಗಳು ದಿ.ಡಾ.ರತನ್ ಟಾಟಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ರತನ್ ಟಾಟಾ ಅವರ ಅಗಲಿಕೆ ಕಲಬುರಗಿಯಲ್ಲಿ ಜನರು ಮಮ್ಮಲು ಮರುಗಿದ್ದಾರೆ. ಟಾಟಾ ಅವರು ಸಾಕಷ್ಟು ಬಡವರಿಗೆ, ನಿರ್ಗತಿಕರಿಗೆ, ಸುರಿಲ್ಲದವರಿಗೆ ಅನ್ನ, ಶಿಕ್ಷಣ, ಉದ್ಯೋಗ ಹಾಗೂ ಆರೋಗ್ಯ ಸೇರಿ ಅನೇಕ ಸಾಮಾಜಿಕ ಕಾರ್ಯ ಮಾಡುವ ಮೂಲಕ ತಮ್ಮನ್ನು ತಾವು ದೇಶಕ್ಕಾಗಿ ಅರ್ಪಿಸಿಕೊಂಡಿದ್ದರು. ಅವರ ಅಗಲಿಕೆ ಅತೀವ ನೋವು ಉಂಟು ಮಾಡಿದೆ ಎಂದು ಅಭಿಮಾನಿಗಳು ನೋವು ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಪೃಥ್ವಿಕುಮಾರ್ ಉತ್ನಾಳಕರ್, ಗುಂಡು ಪಾಟೀಲ್, ಸೂರಿ ಪಾಟೀಲ್ ಮಂದೇವಾಲ್, ಸಚಿನ್ ಎಳಮನಿ, ಅಮಿತ್ ಸಾಲಿಮಠ, ವಿನೋದ್ ಬಿರಾದಾರ್, ದರ್ಶನ್ ವಂಟಿ, ಶ್ರೀಕಾಂತ್ ಗೊಬ್ಬುರಕರ್, ಅಭಿಷೇಕ್ ಗೊಬ್ಬುರ್, ದೇವರಾಜ್ ಬಿರಾದಾರ್, ಮೌನೇಶ್ ಸೇರಿ ಅನೇಕರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...

ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ

ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ...

ಕಲಬುರಗಿ| ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿಗೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಚಾಲನೆ

ಕಲಬುರಗಿ: ಪೊಲೀಸರು ಕೇವಲ ಕಾನೂನು ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕಟ್ಟುನಿಟ್ಟಿನ ಅನುಷ್ಠಾನ...