ರತನ್ ಟಾಟಾ ನಿಧನ: ಯುವಕರಿಂದ ಕ್ಯಾಂಡಲ್ ಮಾರ್ಚ್

Date:

Share post:

ಕಲಬುರಗಿ: ದೇಶದ ಖ್ಯಾತ ಉದ್ಯಮಿ, ಪದ್ಮವಿಭೂಷಣ ರತನ್ ಟಾಟಾ ಅವರ ನಿಧನರಾಗಿದ್ದರಿಂದ ನಗರದ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದ ಬಳಿ ನೂರಾರು ಯುವಕರು ಸೇರಿಕೊಂಡು ಕ್ಯಾಂಡಲ್ ಮಾರ್ಚ್ ಮೂಲಕ ಅಂತಿಮ ನಮನ ಸಲ್ಲಿಸಿದರು.

ಅಧಿಕ ಸಂಖ್ಯೆಯಲ್ಲಿ ಯುವಕರು ಸೇರಿದಂತೆ ನೂರಾರು ಅಭಿಮಾನಿಗಳು ದಿ.ಡಾ.ರತನ್ ಟಾಟಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ರತನ್ ಟಾಟಾ ಅವರ ಅಗಲಿಕೆ ಕಲಬುರಗಿಯಲ್ಲಿ ಜನರು ಮಮ್ಮಲು ಮರುಗಿದ್ದಾರೆ. ಟಾಟಾ ಅವರು ಸಾಕಷ್ಟು ಬಡವರಿಗೆ, ನಿರ್ಗತಿಕರಿಗೆ, ಸುರಿಲ್ಲದವರಿಗೆ ಅನ್ನ, ಶಿಕ್ಷಣ, ಉದ್ಯೋಗ ಹಾಗೂ ಆರೋಗ್ಯ ಸೇರಿ ಅನೇಕ ಸಾಮಾಜಿಕ ಕಾರ್ಯ ಮಾಡುವ ಮೂಲಕ ತಮ್ಮನ್ನು ತಾವು ದೇಶಕ್ಕಾಗಿ ಅರ್ಪಿಸಿಕೊಂಡಿದ್ದರು. ಅವರ ಅಗಲಿಕೆ ಅತೀವ ನೋವು ಉಂಟು ಮಾಡಿದೆ ಎಂದು ಅಭಿಮಾನಿಗಳು ನೋವು ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಪೃಥ್ವಿಕುಮಾರ್ ಉತ್ನಾಳಕರ್, ಗುಂಡು ಪಾಟೀಲ್, ಸೂರಿ ಪಾಟೀಲ್ ಮಂದೇವಾಲ್, ಸಚಿನ್ ಎಳಮನಿ, ಅಮಿತ್ ಸಾಲಿಮಠ, ವಿನೋದ್ ಬಿರಾದಾರ್, ದರ್ಶನ್ ವಂಟಿ, ಶ್ರೀಕಾಂತ್ ಗೊಬ್ಬುರಕರ್, ಅಭಿಷೇಕ್ ಗೊಬ್ಬುರ್, ದೇವರಾಜ್ ಬಿರಾದಾರ್, ಮೌನೇಶ್ ಸೇರಿ ಅನೇಕರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...