ಕಲಬುರಗಿ| ಶಿಕ್ಷಣ ಇಲಾಖೆಯಿಂದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ಶಿಬಿರಕ್ಕೆ ಶಶೀಲ್ ನಮೋಶಿ ಶ್ಲಾಘನೆ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಸಂಘಗಳು ಕಾರ್ಯ ನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಹೇಳಿದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ , ಹಾಗೂ ಉಪನ್ಯಾಸಕರ ಸಂಘ ಕಲಬುರ್ಗಿ ಶಾಖೆಯ ಸಹಯೋಗದಲ್ಲಿ ಜರುಗಿದ ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಹಾಗೂ ರಾಜ್ಯ ಶಾಸ್ತ್ರ ವಿಷಯಗಳ ಉಪನ್ಯಾಸಕರಿಗೆ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಫಲಿತಾಂಶ ಕುಸಿಯುತ್ತಿರುವ ದಕ್ಕೆ ಉಪನ್ಯಾಸಕರು ಕಾರಣರಲ್ಲ ಈ ಭಾಗದಲ್ಲಿ ಪೂರ್ಣ ಪ್ರಮಾಣದ ಶಿಕ್ಷಕರ, ಉಪನ್ಯಾಸಕರ ನೇಮಕಾತಿ ಇಲ್ಲದೆ ಇರುವುದು ಕಾರಣವಾಗಿದೆ ಎಂದು ಹೇಳಿದರು‌.

 

ಈ ಪುನಶ್ಚೇತನ ತರಬೇತಿ ಶಿಬಿರದಲ್ಲಿ ಭಾಗವಹಿಸಿರುವ ವಿಷಯವಾರು ಉಪನ್ಯಾಸಕರು ಇಲ್ಲಿ ತರಬೇತಿ ಪಡೆದು ದೃಡ ಮನಸ್ಸಿನಿಂದ ಕಾರ್ಯ ನಿರ್ವಹಿಸಿ ಈ ಬಾರಿಯ ಫಲಿತಾಂಶ ಸುಧಾರಣೆ ಮಾಡಬೇಕು ಎಂದು ಹೇಳಿದರು‌.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ನೇಮಕಾತಿಗೆ ಸರ್ಕಾರ ಕ್ರಮ ವಹಿಸಲು ಈಗಾಗಲೇ ಹಲವಾರು ಬಾರಿ ಒತ್ತಡ ಹೇರಲಾಗಿದೆ, ಬಡ್ತಿ ಮೂಲಕವು ನೇಮಕಾತಿ ಮಾಡಿಕೊಳ್ಳಲು ಒತ್ತಾಯಿಸಲಾಗಿದೆ ಎಂದರು.

ನನ್ನ ರಾಜಕೀಯ ಸ್ಥಾನಮಾನಕ್ಕೆ ನೀವೆ ಕಾರಣಿಭೂತರು ಅದಕ್ಕಾಗಿ ನಿಮ್ಮ ಕೆಲಸ ಮಾಡುವುದು ನನ್ನ ಕರ್ತವ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಕಲಬುರಗಿಯ ಉಪನಿರ್ದೇಶಕರಾದ ಸುರೇಶ್ ಅಕ್ಕಣ್ಣ ವಹಿಸಿದ್ದರು. ಪದವಿಪೂರ್ವ ಕಾಲೇಜಿನ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಡಾ ಚಂದ್ರಶೇಖರ ದೊಡಮನಿ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಅಧ್ಯಕ್ಷ ಬಸವರಾಜ ಬಿರಾದಾರ, ಉಪನ್ಯಾಸಕರ ಸಂಘ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ, ಸಂಘಟಕ ಐ.ಕೆ ಪಾಟೀಲ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯ ಡಾ. ಮೋಹನ್ ರಾಜ್ ಪತ್ತಾರ ಸ್ವಾಗತಿಸಿದರು. ನರಸಪ್ಪ ರಂಗೋಲಿ ನಿರೂಪಿಸಿದರು. ಬಸವರಾಜ ಗೋಣಿ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...