ಕಲಬುರಗಿ| ಮಹಿಳಾ ಸಬಲೀಕರಣಕ್ಕೆ ಶರಣಸಂಸ್ಥಾನ ಕೊಡುಗೆ ಅಪಾರ: ಡಾ.ವಿಲಾಸವತಿ ಖೂಬಾ

Date:

Share post:

ಕಲಬುರಗಿ : ಈ ಭಾಗದ ಮಹಿಳೆಯರು ಸಬಲರಾಗಲು ಶರಣಬಸವೇಶ್ವರ ಸಂಸ್ಥಾನದ ಕೊಡುಗೆ ಅಪಾರವಾಗಿದೆ ಎಂದು ಬಸವ ಸಮಿತಿಯ ಅಧ್ಯಕ್ಷೆ ಡಾ.ವಿಲಾಸವತಿ ಖೂಬಾ ಹೇಳಿದರು.

ನಗರದ ಗೋದುತಾಯಿ ಮಹಾವಿದ್ಯಾಲಯದಲ್ಲಿ ಶನಿವಾರ ಶರಣಬಸವ ವಿಶ್ವವಿದ್ಯಾಲಯ, ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಣಿಕ ಮಹಾಸಂಘ, ಗೋದುತಾಯಿ ಬಿ.ಈಡ್ ಮಹಿಳಾ ಮಹಾವಿದ್ಯಾಲಯ ಮತ್ತು ಗೋದುತಾಯಿ ಪದವಿ ಮಹಾವಿದ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ಯೋಧರು : ರಾಣಿ ಅಬ್ಬಕ್ಕ ಚೌಟಾ, ರಾಣಿ ಕಿತ್ತೂರ ಚನ್ನಮ್ಮ, ಅಹಲ್ಯಬಾಯಿ ಹೊಳ್ಕರ್ ಮತ್ತು ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರು ಮಹಿಳಾ ಸಬಲೀಕರಣಕ್ಕೆ ಕೊಡುಗೆಗಳು ಎಂಬ ವಿಷಯದ ಮೇಲೆ ನಡೆದ ಒಂದು ದಿನದ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಪೂಜ್ಯ ದೊಡ್ಡಪ್ಪ ಅಪ್ಪ ಮತ್ತು ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರು ಮಹಿಳೆಯರು ಉನ್ನತವಾಗಿ ಬೆಳವಣಿಗೆಗೆ ಕಾರಣಿಕರ್ತರಾಗಿದ್ದಾರೆ. ಅವರು ತೋರಿದ ದಾರಿ ನಾವು ನಡೆಯಬೇಕು ಮತ್ತು ಶರಣರ ತತ್ವಗಳು, ವಚನಗಳು ಪಾಲಿಸಬೇಕು, ಉಳಿಸಬೇಕು, ಬೆಳೆಸಬೇಕು ಎಂದು ಹೇಳಿದರು.

 

ಬೀದರ ಲಿಂಗರಾಜಪ್ಪ ಇಂಜಿನಿಯರಿoಗ್ ಕಾಲೇಜಿನ ನಿರ್ದೇಶಕರಾದ ಡಾ.ಉಮಾತಾಯಿ ಬಿ.ದೇಶಮುಖ ಮಾತನಾಡಿ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂದು ಮನಗಂಡ ಪೂಜ್ಯ ದೊಡ್ಡಪ್ಪ ಅಪ್ಪ ಅವರು ಮಹಿಳೆಯರಿಗಾಗಿಯೇ ಶಿಕ್ಷಣವೆಂಬ ಸಸಿಯನ್ನು ನೆಟ್ಟರು ಅದನ್ನು ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರು ಹೆಮ್ಮರವಾಗಿ ಬೆಳೆಸಿ ಇಂದು ಕಲ್ಯಾಣ ಕರ್ನಾಟಕದ ಹೆಣ್ಣು ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳಲ್ಲಿದ್ದಾರೆ. ಮಹಿಳೆಯರಿಗಾಗಿಯೇ ಅನೇಕ ಶಾಲಾ ಕಾಲೇಜುಗಳನ್ನು ಆರಂಭಿಸಿದ್ದಾರೆ. ಅವರ ಸಂಸ್ಥೆಯಲ್ಲಿ ಮಹಿಳಾ ಉದ್ಯೋಗಿಗಳು ಮತ್ತು ಮಹಿಳಾ ವಿದ್ಯಾರ್ಥಿನಿಯರ ಸಂಖ್ಯೆಯೇ ಹೆಚ್ಚಾಗಿದೆ. ಮಹಿಳಾ ಯೋಧರಾದ ರಾಣಿ ಅಬ್ಬಕ್ಕ ಚೌಟಾ, ರಾಣಿ ಕಿತ್ತೂರ ಚನ್ನಮ್ಮ, ಅಹಲ್ಯಬಾಯಿ ಹೊಳ್ಕರ್ ರಂತೆ ಸಂಸ್ಥೆಯಲ್ಲಿ ಅನೇಕ ಮಹಿಳೆಯರು ಜ್ಞಾನದ, ಧೈರ್ಯದ, ಸಾಹಸದ ಯೋಧರಾಗಿ ಹೊರಹೊಮ್ಮತ್ತಿದ್ದಾರೆ. ಪೂಜ್ಯರ ಆಶಯದಂತೆ ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕು, ಪುರುಷರ ಸರಿಸಮಾನವಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರು.

 

ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಗಣಪತಿ ಬಿ. ಸಿನ್ನೂರ ಮಾತನಾಡಿ, ಪೂಜ್ಯ ಡಾ.ಅಪ್ಪ ಅವರು ಶಿಕ್ಷಣದ ಭದ್ರ ಬುನಾದಿ ಹಾಕಿ ಮಹಿಳಾ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು, ಮಹಿಳೆಯರು ಯಾವುದರಲ್ಲೂ ಕಡಿಮೆ ಇಲ್ಲವೆಂದು ತೋರಿಸಿಕೊಟ್ಟಿದ್ದಾರೆ. ಮಹಿಳಾ ಯೋಧರಾದ ರಾಣಿ ಅಬ್ಬಕ್ಕ ಚೌಟಾ, ರಾಣಿ ಕಿತ್ತೂರ ಚನ್ನಮ್ಮ, ಅಹಲ್ಯಬಾಯಿ ಹೊಳ್ಕರ್ ಅವರ ಧೈರ್ಯ, ಸಾಹಸದ ಕುರಿತು ಹೇಳಿದರು.

 

ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ ಕಾಲೇಜುಗಳ ನಿರ್ದೇಶಕರಾದ ಡಾ.ನೀಲಾಂಬಿಕಾ ಶೇರಿಕಾರ ಮಾತನಾಡಿ, 12ನೇ ಶತಮಾನದದಲ್ಲಿ ಅನುಭವ ಮಂಟಪದ ಜೀವಾಳವಾಗಿ, ಅನ್ನಪೂರ್ಣೆಯಾಗಿ ಅನುಕರಣೀಯ ಸೇವೆ ನೀಡಿದ ಶರಣೆ ಅಕ್ಕನಾಗಮ್ಮ ಮೊದಲು ಮಹಿಳಾ ಯೋಧಳು. ಹಾಗೆಯೇ ಪೂಜ್ಯ ಡಾ.ದಾಕ್ಷಾಯಣಿ ಅವ್ವ ಅವರು ಎಲ್ಲರನ್ನೂ ಆತ್ಮೀಯವಾಗಿ ತಮ್ಮವರೆನ್ನುವ ಭಾವ ಹೊಂದಿದ್ದಾರೆ ಎಂದರು.

 

ಕಾರ್ಯಕ್ರಮದ ಅಧ್ಯಕ್ಷತೆ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಕಲ್ಪನಾ ಭೀಮಳ್ಳಿ ವಹಿಸಿ ಮಾತನಾಡಿದರು. ವೇದಿಕೆ ಮೇಲೆ ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ ಇದ್ದರು.

ಪ್ರಾಚಾರ್ಯೆ ಡಾ.ಕಲ್ಪನಾ ಭೀಮಳ್ಳಿ ಸ್ವಾಗತಿಸಿದರು, ಪ್ರಾಧ್ಯಾಪಕರಾದ ಸುಪ್ರೀಯಾ ನಾಗಶೆಟ್ಟಿ ನಿರೂಪಿಸಿದರೆ, ಅಶ್ವಿನಿ ವಂದಿಸಿದರು. ಸಂಗೀತ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕ, ಶಿಕ್ಷಕೇತರರು ಮತ್ತು ವಿದ್ಯಾರ್ಥಿನಿಯರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...