ಕಲಬುರಗಿ| ಕಲಬುರಗಿ ಕನ್ನಡ ಜಾಗೃತಿ ಸಮಿತಿಗೆ 10 ಮಂದಿಯ ನೇಮಕ

Date:

Share post:

ಕಲಬುರಗಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿಗೆ ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಧಿಕಾರೇತರ ಸದಸ್ಯರನ್ನಾಗಿ ಹಾಗೂ ಜಿಲ್ಲಾ ಮಟ್ಟದ ಜಾಗೃತ ಸಮಿತಿಗೆ ತಲಾ ಐವರನ್ನು ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ಮಹಾನಗರ ವ್ಯಾಪ್ತಿಯಲ್ಲಿ ಶ್ರೀಶೈಲ ನಾಗರಾಳ, ಸಾಹಿತಿ ವಿಶ್ವನಾಥ ಭಕರೆ, ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅತಿಥಿ ಉಪನ್ಯಾಸಕಿ ಕರುಣಾ ಜಮಾದಾರಖಾನಿ, ಹೋರಾಟಗಾರ ಸುನಿಲ ಮಾನ್ಪಡೆ, ಸೈಯದಾ ಸೂಫಿಯಾ ಬೇಗಂ ಹಾಗೂ ಮಹಾದೇವಿ ಎಂ.ಬಿ. ನಿಂಗಪ್ಪ ಅವರನ್ನು ನೇಮಿಸಲಾಗಿದೆ. ಅದರಂತೆಯೇ ಜಿಲ್ಲಾ ಮಟ್ಟದ ಜಾಗೃತ ಸಮಿತಿಗೆ ಪತ್ರಕರ್ತ ಮಾಜಿದ್ ಡಾಗಿ, ಪ್ರಾಧ್ಯಾಪಕ ಶರಣಬಸಪ್ಪ ವಡ್ಡನಕೇರಿ, ಜೇವರ್ಗಿ ತಾಲ್ಲೂಕಿನ ಕಾಶಿನಾಥ, ಮಹಿಳಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ನಂದಿನಿ ಸುರೇಂದ್ರ ಸನಬಾಳ, ಚಿಂಚೋಳಿ ತಾಲ್ಲೂಕಿನ ಸಾಲೆಬೀರನಹಳ್ಳಿಯ ಮಂಜುನಾಥ ಅವರನ್ನು ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...