ಕಲಬುರಗಿ| ಸ್ಲಂ ಪ್ರದೇಶಗಳೆಂದು ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ

Date:

Share post:

ಕಲಬುರಗಿ: ಕಲಬುರಗಿ ಮತ್ತು ಯಾದಗೀರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ರಾಮ ನಗರ(ಭಾಗ-2) ಸಂಜುನಗರ (ಭಾಗ -2), ಮೋನೆಶ್ವರ ನಗರ, ಶಶಿಧರ ನಗರ, ಮದನಪೂರ (ಭಾಗ-2) ತಪ್ಪಡಗೇರಾ, ಗಂಗಾನಗರ, ಅಘೋಶಿತ ಸ್ಲಂ ಗಳನ್ನು ಸ್ಲಂ ಕಾಯ್ದೆ 1975 ರ ಕಲಂ 3 ಪಿ ಅಡಿಯಲ್ಲಿ ಸ್ಲಂ ಎಂದು ಘೋಷಿಸಿ ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕ, ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸ್ಲಂ ಘೋಷಣೆಗೆ 3 ವರ್ಷಗಳ ಕಾಲ ವಿಳಂಬ ನೀತಿ ಅನುಸರಿಸಿದ ಸ್ಲಂ ಬೋರ್ಡ್ ಅಧಿಕಾರಿಗಳಾದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರುಗಳಾದ ಶ್ರೀಧರ ಸಾರವಾಡ ಮತ್ತು ದೇವಿಂದ್ರಕುಮಾರ ಇವರುಗಳನ್ನು ಅಮಾನತ್ತು ಮಾಡಿ ಆದೇಶಿಸಬೇಕು ಎಂದು ಆಗ್ರಹಿಸಿದರು.

 

ಸ್ಲಂ ಗಳಲ್ಲಿ ಅಲೆಮಾರಿ ಜನಾಂಗ, ಎಸ್ ಸಿ ಜನಾಂಗದವರು ಹೆಚ್ಚು ವಾಸ ಮಾಡುತ್ತಿದ್ದಾರೆ, ಈ ಸ್ಲಂಗಳನ್ನು ಘೋಷಣೆ ಮಾಡಿ ನೀರು, ಚರಂಡಿ ಬೀದಿ ದೀಪ ಅಳವಡಿಕೆ, ರಸ್ತೆ ನಿರ್ಮಾಣ ಮತ್ತು ಮಹಿಳೆಯರಿಗೆ ಶೌಚಾಲಯಗಳನ್ನು ನಿರ್ಮಿಸಿಕೊಡಲು ಸುಮಾರು ಮೂರು ವರ್ಷಗಳಿಂದ ಹೋರಾಟದ ಮುಖಾಂತರ ಮನವಿ ನೀಡಿದರು ಕೂಡ ಸಹಾಯಕ ಕಾರ್ಯನಿರ್ವಾಹ ಅಭಿಯಂತರುಗಳು ಇವರೆಗೆ ಕ್ರಮ ಕೈಗೊಂಡಿಲ್ಲ, ಹಾಗಾಗಿ ಅಂತಹ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದರು.

 

ಸಾಮಾಜಿಕ ನ್ಯಾಯದಡಿ ಸಂವಿಧಾನ ಬದ್ದ ಹಕ್ಕುಗಳಾದ ಅಘೋಷಿತ ಸ್ಲಂ ಗಳನ್ನು ಶೀಘ್ರದಲ್ಲಿ ಸ್ಲಂ ಎಂದು ಘೋಷಿಸಲು ಅಧಿಕಾರಿಗಳಿಗೆ ಆದೇಶಿಸಬೇಕು ಮತ್ತು ಸುಮಾರು ವರ್ಷಗಳಿಂದ ಸ್ಲಂ ಜನರಿಗೆ ಮೂಲಭೂತ ಸೌಲಭ್ಯಗಳಾದ ನೀರು ಚರಂಡಿ ಬೀದಿ ದೀಪ, ಮಹಿಳೆಯರಿಗೆ ಶೌಚಾಲಯಗಳನ್ನು ಒದಗಿಸದ ಸಹಾಯಕ ಕಾರ್ಯನಿರ್ವಾಕ ಅಭಿಯಂತರರನ್ನು ಕೂಡಲೆ ಅಮಾನತ್ ಮಾಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅಧ್ಯಕ್ಷ ಹಣಮಂತ ಶಹಾಪೂರಕರ್, ಉಪಾಧ್ಯಕ್ಷೆ ದ್ಯಾನಮ್ಮ, ಸಂಚಾಲಕಿ ರೇಣುಕಾ ಸರಡಗಿ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...