ಕಲಬುರಗಿ| ಮಕ್ಕಳಲ್ಲಿ ಸೂಕ್ಷ್ಮ ಪ್ರಪಂಚದ ಯಾತ್ರೆ ಅವಶ್ಯಕ: ಡಾ. ಪಾಟೀಲ

Date:

Share post:

ಕಲಬುರಗಿ: ಇಂದು ಎಲ್ಲ ಮಕ್ಕಳ ಕೈಯಲ್ಲಿ ಕೇವಲ ಮೊಬೈಲ್ ಕಾಣುತ್ತದೆ, ಆದರೆ ಕಾಲೇಜಿನ ವಿದ್ಯಾರ್ಥಿನಿಯರು ಹುದುಗುವಿಕೆ ಉತ್ಸವ ಆಯೋಜಿಸಿರುವುದು ಮಕ್ಕಳಲ್ಲಿ ಸೂಕ್ಷ್ಮ ಪ್ರಪಂಚದ ಜ್ಞಾನ ಅವಶ್ಯಕ ಎಂದು ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯಾದ ಡಾ. ಸಿ. ಸಿ. ಪಾಟೀಲ ಹೇಳಿದ್ದಾರೆ.

ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡ ಒಂದು ದಿನದ ಹುದುಗುವಿಕ ಉತ್ಸವ ಉದ್ಘಾಟಿಸಿ ಮಾತನಾಡಿದರು.

ಇಂದು ಸೂಕ್ಷ್ಮ ಜೀವಶಾಸ್ತ್ರದ ಅಧ್ಯಯನ ಅತಿ ಅವಶ್ಯಕ, ಈ ಅಧ್ಯಯನ ದಿಂದ ಪ್ರಪಂಚದಲ್ಲಿ ಹುಟ್ಟುವ ಅನೇಕ ವೈರಸ್ಗಳ ಪತ್ತೆ ಹಚ್ಚಬಹುದು ಎಂದು ಹೇಳಿದರು. ಕರೋನಾ ಅಂತಹ ವೈಶ್ವಿಕ ರೋಗ ಪತ್ತೆ ಹಚ್ಚಿಲ್ಲು ಸಹಕಾರಿ ಎಂದರು.

ಹುದುಗುವಿಕ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ವಹಿಸಿಕೊಂಡು ಸೂಕ್ಷ್ಮ ಜೀವಶಾಸ್ತ್ರ ವಿಭಾಗದವರು ಹಮ್ಮಿಕೊಂಡ ಈ ಉತ್ಸವ ಬೇರೆ ವಿಭಾಗಗಳಿಗೆ ಪ್ರೋತ್ಸಾಹ ನೀಡುವ ಕೊಂಡಿ ಎಂದು ಹೇಳಿದರು.

ಉದ್ಘಾಟನಾ ಸಮಾರಂಭದಲ್ಲಿ ಮಹಾವಿದ್ಯಾಲಯದ ಉಪ ಪ್ರಾಚಾರ್ಯರಾದ ಪ್ರೊ ವೀಣಾ ಎಚ್ ಮತ್ತು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ ಮೋಹನರಾಜ ಪತ್ತಾರ ಅವರು ಉಪಸ್ಥಿತರಿದ್ದರು.

ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶಿಲ್ಪಾ ಬಂದ್ರವಾಡ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳಿಗೆ ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗದ ಉಪನ್ಯಾಸಕಿಯಾದ ಸ್ಮಿತಾ ಪಾಟೀಲ್ ಅವರು ವಂದಿಸಿದರು.

ಕಾರ್ಯಕ್ರಮದ ತರುವಾಯ ಮಹಾವಿದ್ಯಾಲಯದ ಮತ್ತು ಪದವಿ ಪೂರ್ವ ಕಾಲೇಜಿನ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಈ ಉತ್ಸವದ ಲಾಭ ಪಡೆದುಕೊಂಡರು ಎಂದು ಕಾಲೇಜಿನ ಮಾಧ್ಯಮ ಸಮಿತಿಯ ಸದಸ್ಯರಾದ ಡಾ. ಮಹೇಶ ಗಂವ್ಹಾರ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...