ಕಲಬುರಗಿ| ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಸೇವಾ ಮನೋಭಾವನೆಯಿಂದ ಕೆಲಸ ನಿರ್ವಹಿಸಲು ಹಾಗೂ ಕಾನೂನು ಸೇವಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಶಿಕ್ಷಕರು/ನಿವೃತ್ತ ಶಿಕ್ಷಕರು, ಮಾಜಿ ಗ್ರಾಮ ಪಂಚಾಯತಿ ಸದಸ್ಯರು, ನಿವೃತ್ತ ಸರ್ಕಾರಿ ನೌಕರರು /ಹಿರಿಯ ನಾಗರಿಕರು, ಕಾನೂನು ಕ್ಷೇತ್ರದಲ್ಲಿ ತೊಡಗಿಸಿಕೊಂಡ ಸಾಮಾಜಿಕ ಕಾರ್ಯಕರ್ತರು, ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಾನೂನು ವಿದ್ಯಾರ್ಥಿಗಳು, ರಾಜಕೀಯ ಪಕ್ಷಕ್ಕೆ ಸೇರದ ಸಂಘದವರು, ಸ್ವ-ಸಹಾಯ ಮಹಿಳಾ ಗುಂಪಿನವರು, ಮಾಜಿ ಸೈನಿಕರು ಹಾಗೂ ಸೈನಿಕರ ಪತ್ನಿಯರು ಅಥವಾ ವಯಸ್ಕ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

 

ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಸಮಿತಿ ರಚನೆಯಾಗಿದ್ದು, ಅವಶ್ಯಕತೆ ಇದ್ದಲ್ಲಿ ಸಂದರ್ಶನದ ಮೂಲಕ ಅರೇ ಕಾಲಿಕ ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗುತ್ತದೆ. ಆರೆ-ಕಾಲಿಕ ಸ್ವಯಂ ಸೇವಕರು ಸಲ್ಲಿಸುವ ಸೇವೆಗೆ ಯಾವುದೇ ವೇತನ/ಶುಲ್ಕ ಇರುವುದಿಲ್ಲ. ಆದರೆ ಕೆಲವೂಮ್ಮೆ ಗೌರವಧನಕ್ಕಾಗಿ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಗೆ 2025ರ ಸೆಪ್ಟೆಂಬರ್ 29 ರಂದು ಕೊನೆಯ ದಿನವಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...