ಕಲಬುರಗಿ| ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಸೇವಾ ಮನೋಭಾವನೆಯಿಂದ ಕೆಲಸ ನಿರ್ವಹಿಸಲು ಹಾಗೂ ಕಾನೂನು ಸೇವಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಶಿಕ್ಷಕರು/ನಿವೃತ್ತ ಶಿಕ್ಷಕರು, ಮಾಜಿ ಗ್ರಾಮ ಪಂಚಾಯತಿ ಸದಸ್ಯರು, ನಿವೃತ್ತ ಸರ್ಕಾರಿ ನೌಕರರು /ಹಿರಿಯ ನಾಗರಿಕರು, ಕಾನೂನು ಕ್ಷೇತ್ರದಲ್ಲಿ ತೊಡಗಿಸಿಕೊಂಡ ಸಾಮಾಜಿಕ ಕಾರ್ಯಕರ್ತರು, ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಾನೂನು ವಿದ್ಯಾರ್ಥಿಗಳು, ರಾಜಕೀಯ ಪಕ್ಷಕ್ಕೆ ಸೇರದ ಸಂಘದವರು, ಸ್ವ-ಸಹಾಯ ಮಹಿಳಾ ಗುಂಪಿನವರು, ಮಾಜಿ ಸೈನಿಕರು ಹಾಗೂ ಸೈನಿಕರ ಪತ್ನಿಯರು ಅಥವಾ ವಯಸ್ಕ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

 

ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಸಮಿತಿ ರಚನೆಯಾಗಿದ್ದು, ಅವಶ್ಯಕತೆ ಇದ್ದಲ್ಲಿ ಸಂದರ್ಶನದ ಮೂಲಕ ಅರೇ ಕಾಲಿಕ ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗುತ್ತದೆ. ಆರೆ-ಕಾಲಿಕ ಸ್ವಯಂ ಸೇವಕರು ಸಲ್ಲಿಸುವ ಸೇವೆಗೆ ಯಾವುದೇ ವೇತನ/ಶುಲ್ಕ ಇರುವುದಿಲ್ಲ. ಆದರೆ ಕೆಲವೂಮ್ಮೆ ಗೌರವಧನಕ್ಕಾಗಿ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಗೆ 2025ರ ಸೆಪ್ಟೆಂಬರ್ 29 ರಂದು ಕೊನೆಯ ದಿನವಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...