ಕಲಬುರಗಿ| ಆರೋಗ್ಯಕರ ಜೀವನಶೈಲಿಯಿಂದ ಕಾಯಿಲೆಗಳು ದೂರ: ಡಾ. ಅಂಕಿತ್ ಕದರ್ಗಿ

Date:

Share post:

ಕಲಬುರಗಿ: ನಾವು ಆರೋಗ್ಯ ಕಳೆದುಕೊಂಡು ಬೇರೆ ಏನೆಲ್ಲಾ ಸಂಪತ್ತು ಗಳಿಸಿದರೂ ವ್ಯರ್ಥ. ಪ್ರಸ್ತುತ ದಿನಗಳಲ್ಲಿ ಜನರು ಆರೋಗ್ಯದತ್ತ ಗಮನಹರಿಸದೆ, ಅನಾರೋಗ್ಯಕರ ಜೀವನಶೈಲಿಯಲ್ಲಿದ್ದಾರೆ. ಆದ್ದರಿಂದ ಅನೇಕ ಕಾಯಿಲೆಗಳು ಉಂಟಾಗುತ್ತಿವೆ. ಎಲ್ಲರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಕಾಯಿಲೆಗಳಿಂದ ದೂರವಿರಬಹುದಾಗಿದೆ. ಆರೋಗ್ಯವೇ ಮನುಷ್ಯನ ದೊಡ್ಡ ಸಂಪತ್ತಾಗಿದ್ದು, ಅದನ್ನು ಕಾಪಾಡಿಕೊಳ್ಳಬೇಕು ಎಂದು ತಜ್ಞ ವೈದ್ಯ ಡಾ.ಅಂಕಿತ್ ಆರ್.ಕದರ್ಗಿ ಅಭಿಪ್ರಾಯಪಟ್ಟರು.

ನಗರದ ಆಳಂದ ರಸ್ತೆಯ ಕೆ.ಎಚ್.ಬಿ. ಗ್ರೀನ್ ಪಾರ್ಕನ ಹನುಮಾನ ದೇವಸ್ಥಾನದ ಆವರಣದಲ್ಲಿ ‘ಆಯುಸಿಂಕ್ ಮೆಡಿಕಲ್ ಕಂಪನಿ’ ಮತ್ತು ಬಡಾವಣೆಯ ಜಂಟಿ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಒಂದು ದಿನದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡುತ್ತಿದ್ದರು.

ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಕೆ.ಎಚ್.ಬಿ ಗ್ರೀನ್ ಪಾರ್ಕ ಕ್ಷೇಮಾಭಿವೃದ್ಧಿ ಸಂಘದ ಅದ್ಯಕ್ಷ ಸಂಜೀವಕುಮಾರ ಶೆಟ್ಟಿ ಮತ್ತು ಸಿಪಿಐ ಶ್ರೀಶೈಲ್ ತಾರದಾಳ, ಪೌಷ್ಠಿಕಾಂಶಗಳುಳ್ಳ ಆಹಾರ ಸೇವನೆ, ಶುದ್ಧವಾದ ನೀರನ್ನು ಕುಡಿಯುವುದು, ದಿನಕ್ಕೆ 7-8 ಗಂಟೆಗಳ ಕಾಲ ಗಾಡ ನಿದ್ರೆ, ನಿಯಮಿತವಾಗಿ ವ್ಯಾಯಾಮ, ಯೋಗ ಮಾಡುವುದು, ಸಕಾರಾತ್ಮಕ ಚಿಂತನೆಯಂತಹ ಆರೋಗ್ಯಕರ ಜೀನವಶೈಲಿಯನ್ನು ಅಳವಡಿಸಿಕೊಳ್ಳಬೇಕಾಗಿದೆ. ಏನಾದರೂ ಸಮಸ್ಯೆ ಕಂಡುಬಂದರೆ ಸ್ವಂತ ವೈದ್ಯರಾಗದೆ, ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಆಯುಸಿಂಕ್ ಕಂಪನಿಯ ಸಮಾಜಪರ ಕಾಳಜಿ ಶ್ಲಾಘನೀಯವಾಗಿದೆ ಎಂದು ತಿಳಿಸಿದರು.

ಆಯುಸಿಂಕ್ ಮೆಡಿಕಲ್ ಕಂಪನಿಯ ಸಂಸ್ಥಾಪಕ ಹಾಗೂ ಸಿಇಓ ಆದರ್ಶ ಕೆ. ಮಾತನಾಡಿ, ನಮ್ಮ ಕಂಪನಿಯು ರಾಜ್ಯದೆಲ್ಲೆಡೆ ಸಂಚರಿಸಿ ಬೃಹತ್ ಉಚಿತವಾದ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಆರೋಗ್ಯಯುತ ಸದೃಢ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಶಿಬಿರದಲ್ಲಿ 12 ಜನರ ವೈದ್ಯರು ಮತ್ತು ಸಿಬ್ಬಂದಿಯ ತಂಡದಿಂದ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ 400ಕ್ಕೂ ಅಧಿಕವಾಗಿ ಬಡಾವಣೆಯ ಜನರಿಗೆ ರಕ್ತದೊತ್ತಡ, ಮದುಮೇಹ, ಹೃದಯ ಸಂಬಂಧಿ ಕಾಯಿಲೆಗಳು, ಕೊಲೆಸ್ಟ್ರಾಲ್ ಪರೀಕ್ಷೆ ಸೇರಿದಂತೆ ಮುಂತಾದ ಅನೇಕ ಕಾಯಿಲೆಗಳಿಗೆ ಸಂಬಂಧಿಸಿದಂತೆ ತಪಾಸಣೆ ಮಾಡಲಾಯಿತು.

ಶಿಬಿರದಲ್ಲಿ ಆಯುಸಿಂಕ್ ಮೆಡಿಕಲ್ ಕಂಪನಿಯ ಸೌರಭ ಪಾಂಡೆ, ಶ್ರೇಯಸ್ ಎಸ್., ವಿಜಿಮಾಲ್ ಎಸ್., ಸ್ನೇಹಾ, ರಂಜಿತ್, ಸೌರಭ, ಹರಿತಾ, ಸಾನಿಯಾ, ಸೈನಾ, ರಿಪಾ, ಅಂಕಿತ್, ಶೌಕತ್, ಶಮೀನಾ, ಡಾ.ವಿಜಯಶ್ರೀ, ಯೋಗೇಶ್, ನವಾಜ್ ಅವರು ತಪಾಸಣೆ ಮಾಡಿದರು. ಸಮಾಜ ಸೇವಕರಾದ ಎಚ್.ಬಿ.ಪಾಟೀಲ್, ಶಿವಯೋಗೆಪ್ಪಾ ಎಸ್.ಬಿರಾದಾರ, ಕ್ಷೇಮಾಭಿವೃದ್ಧಿ ಸಂಗದ ಉಪಾಧ್ಯಕ್ಷ ಬಾಲಕೃಷ್ಣ ಕುಲಕರ್ಣಿ, ಬಡಾವಣೆಯ ಸಂಗಮೇಶ್ವರ ಸರಡಗಿ, ರಾಜಕುಮಾರ ಕದರ್ಗಿ, ಬಸವರಾಜ ಹೆಳವರ ಯಾಳಗಿ, ವಿರೇಶ್ ಬೋಳಶೆಟ್ಟಿ ನರೋಣಾ, ಮಲ್ಲಿನಾಥ ಮುನ್ನಳ್ಳಿ, ಶಿವಕಾಂತ ಚಿಮ್ಮಾ, ವೀರಯ್ಯ ಹಿರೇಮಠ, ಶ್ರೀನಿವಾಸ ಬುಜ್ಜಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...