ಕಲಬುರಗಿ| ಕನ್ನಡ ನಾಮಫಲಕ ತೆಗೆದು ಹಾಕಿದ ಅಧಿಕಾರಿಗಳನ್ನು ವಜಾ ಮಾಡುವಂತೆ ಆಗ್ರಹ

Date:

Share post:

ಕಲಬುರಗಿ: ನಗರದಲ್ಲಿ ಕಣ್ಣಿ ಮಾರುಕಟ್ಟೆ ಎಂ.ಎಸ್.ಕೆ. ಮಿಲ್ ಪ್ರದೇಶದಲ್ಲಿ ಕಟ್ಟಡಗಳ ಮೇಲಿದ್ದ ಕನ್ನಡ ನಾಮಫಲಕಗಳನ್ನು ತೆರವುಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ ಕೂಡಲೇ ಮೊದಲು ಕನ್ನಡಕ್ಕೆ ಆದ್ಯತೆ ಕೊಟ್ಟು ಕರ್ನಾಟಕ ಸರ್ಕಾರದ ಆದೇಶದ ವರದಿಯಂತೆ ಶೇ.60% ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಕ್ಕೆ ಅವಮಾನ ಮಾಡಿದರೇ ಕನ್ನಡಿಗರಿಗೆ ಅವಮಾನ ಮಾಡಿದಂತೆ ಇಲ್ಲಿಯ ಗಾಳಿ ನೀರು ಅನ್ನ ತಿಂದು ಕನ್ನಡಕ್ಕೆ ಅವಮಾನ ಮಾಡಿದಂಥ ಅಧಿಕಾರಿ ಕನ್ನಡಿಗರ ಭಾವಣೆಗಳಿಗೆ ಧಕ್ಕೆ ತಂದಂತಾಗಿದೆ. ಮೊದಲು ಕನ್ನಡಕ್ಕೆ ಆದ್ಯತೆ ಕೊಡದಂತಹ, ಕನ್ನಡದ ವಿಚಾರವಾಗಿ ಉಡಾಫೆ ಮಾತನ್ನು ಆಡಿದಂತಹ ಅಧಿಕಾರಿಯನ್ನು ಕೂಡಲೇ ವಜಾಗೊಳಿಸಬೇಕು ಮತ್ತು ಕೂಡಲೇ ಕನ್ನಡದ ನಾಮಫಲಕ ಕಣ್ಣಿ ಮಾರುಕಟ್ಟೆ ಪ್ರದೇಶದಲ್ಲಿ ಕಟ್ಟಡಗಳ ಮೇಲಿದ್ದ ಕನ್ನಡ ನಾಮಫಲಕವನ್ನು ಶೇ. 60% ನಾಮಫಲಕ ಅಳವಡಿಸಬೇಕು. ಇಲ್ಲವಾದರೆ ತಮ್ಮ ಕಚೇರಿಗೆ ಮುತ್ತಿಗೆ ಹಾಕುವುದು ಅನಿವಾರ್ಯವಾಗುತ್ತದೆ ಮುಂದಿನ ಆಗುಹೋಗುಗಳಿಗೆ ತಾವುಗಳು ನೇರ ಹಾಗೂ ಸಂಪೂರ್ಣ ಜವಾಬ್ದಾರರಾಗುತ್ತಿರಿ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರುನಾಡ ವಿಜಯಸೇನೆಯ ಜಿಲ್ಲಾ ಅಧ್ಯಕ್ಷ ಪೃಥ್ವಿರಾಜ ಎಸ್ ರಾಂಪುರ, ಗಣಪತಿ ಪುಲಾರಿ, ಯುವ ಘಟಕದ ಅಧ್ಯಕ್ಷ ನಾಗರಾಜ ಮ್ಯಾತ್ರಿ , ಉಪಾಧ್ಯಕ್ಷ ಬಸವರಾಜ್ ಜಿ, ರಾಜೇಂದ್ರ ಟೈಗರ್, ವಿಶ್ವನಾಥ, ಶಿವಶಂಕರ್ ದೊಡ್ಡಮನಿ, ಸತೀಶ್ ಪುಲೆ, ಪಾವನ ದೊಡ್ಡಮನಿ, ಶಿವಪ್ಪ ಹುಡುಗಿ, ಸಚಿನ ತಳವಾರ್ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...