ಕಲಬುರಗಿ| ಆದಿಬಣಜಿಗರು ಜಾತಿ ಲಿಂಗಾಯತ ಎಂದು ನಮೂದಿಸಿ: ಜಗನ್ನಾಥ ಶೇಗಜಿ 

Date:

Share post:

ಕಲಬುರಗಿ: ಹಿಂದುಳಿದ ವರ್ಗಗಳ ಆಯೋಗ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಸುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಆದಿ ಬಣಜಿಗರು, ಧರ್ಮದ ಕಾಲಂ ನಲ್ಲಿ ಹಿಂದೂ, ಜಾತಿ ಲಿಂಗಾಯತ ಹಾಗು ಉಪಜಾತಿ ಕಾಲಂನಲ್ಲಿ ಆದಿ ಬಣಜಿಗ ಎಂದು ನಮೂದಿಸಬೇಕು ಎಂದು ಸಮುದಾಯದ ಮಾಜಿ ಅಧ್ಯಕ್ಷ ಜಗನ್ನಾಥ ಶೇಗಜಿ ಹೇಳಿದರು.

ನಗರದ ಪತ್ರಿಕಾ ಭವನದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿ ಬಣಜಿಗ ಸಮಾಜದ ಜನರಲ್ಲಿ ಸಾಕಷ್ಟು ಗೊಂದಲ ಉಂಟಾಗಿದೆ. ರಾಜ್ಯ ಸರಕಾರ ಕೈಗೊಳ್ಳಲಿರುವ ಸಮೀಕ್ಷೆಯಲ್ಲಿ ಏನನ್ನು ನಮೂದಿಸಬೇಕು ಎನ್ನುವುದು ಗೊಂದಲ ನಿರ್ಮಾಣವಾಗಿದೆ. ಆದರಿಂದ ರಾಜ್ಯ ಮಟ್ಟದ ಸಮಾಜದ ಸಭೆ ನಡೆಸಿ, ಅಂತಮ ತೀರ್ಮಾನ ತೆಗೆದುಕೊಂಡಿದ್ದು, ಧರ್ಮ ಹಿಂದೂ, ಜಾತಿ ಲಿಂಗಾಯತ, ಉಪಜಾತಿ ಆದಿ ಬಣಜಿಗ ಎಂದೇ ಬರೆಸಲು ತಿಳಿಸಲಾಗಿದೆ ಎಂದರು.

ಸಮೀಕ್ಷೆದಾರರು ಮನೆಗೆ ಬಂದಾಗ ಕುಟುಂಬ ಗುರುತಿನ ಚೀಟಿ, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಸಮೀಕ್ಷಕರಿಗೆ ಸಹಕರಿಸಬೇಕು. ಸಮಾಜದ ಜನಸಂಖ್ಯೆ ಹೆಚ್ಚಳವಾದರೆ ಹೆಚ್ಚಿನ ಸೌಲಭ್ಯ ದೊರೆಯಲಿವೆ. ಹೀಗಾಗಿ ಕಡ್ಡಾಯವಾಗಿ ಎಲ್ಲರೂ ಸಮೀಕ್ಷೆಯಲ್ಲಿ ಭಾಗಿಯಾಗಿ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ವೀರಣ್ಣ ಮಂಗಾಣೆ, ವಿಶ್ವನಾಥ್ ಗೌನಹಳ್ಳಿ, ಗುಂಡರಾವ್ ಪದ್ಮಾಜಿ, ಗಿರಿರಾಜ್ ಯಳಿಮೇಲಿ, ಗುಪ್ತಲಿಂಗ, ರಾಜೇಂದ್ರ ಕರೆಕಲ್ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಮಿಣಜಗಿಯಲ್ಲಿ ಹೊಸ ಕಟ್ಟಡಗಳ ಲೋಕಾರ್ಪಣೆ

ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ...

ಕಲಬುರಗಿ| ಫೆ.12 ರಿಂದ ಡಿ.ಇ.ಸಿ. ಸಾಮೂಹಿಕ ಗುಳಿಗೆ ನುಂಗಿಸುವ ಕಾರ್ಯಕ್ರಮ: ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ

ಕಲಬುರಗಿ: ಆನೆಕಾಲು ರೋಗ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇದೇ ಫೆಬ್ರವರಿ 12...

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...