ಕಲಬುರಗಿ| ಆದಿಬಣಜಿಗರು ಜಾತಿ ಲಿಂಗಾಯತ ಎಂದು ನಮೂದಿಸಿ: ಜಗನ್ನಾಥ ಶೇಗಜಿ 

Date:

Share post:

ಕಲಬುರಗಿ: ಹಿಂದುಳಿದ ವರ್ಗಗಳ ಆಯೋಗ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಸುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಆದಿ ಬಣಜಿಗರು, ಧರ್ಮದ ಕಾಲಂ ನಲ್ಲಿ ಹಿಂದೂ, ಜಾತಿ ಲಿಂಗಾಯತ ಹಾಗು ಉಪಜಾತಿ ಕಾಲಂನಲ್ಲಿ ಆದಿ ಬಣಜಿಗ ಎಂದು ನಮೂದಿಸಬೇಕು ಎಂದು ಸಮುದಾಯದ ಮಾಜಿ ಅಧ್ಯಕ್ಷ ಜಗನ್ನಾಥ ಶೇಗಜಿ ಹೇಳಿದರು.

ನಗರದ ಪತ್ರಿಕಾ ಭವನದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿ ಬಣಜಿಗ ಸಮಾಜದ ಜನರಲ್ಲಿ ಸಾಕಷ್ಟು ಗೊಂದಲ ಉಂಟಾಗಿದೆ. ರಾಜ್ಯ ಸರಕಾರ ಕೈಗೊಳ್ಳಲಿರುವ ಸಮೀಕ್ಷೆಯಲ್ಲಿ ಏನನ್ನು ನಮೂದಿಸಬೇಕು ಎನ್ನುವುದು ಗೊಂದಲ ನಿರ್ಮಾಣವಾಗಿದೆ. ಆದರಿಂದ ರಾಜ್ಯ ಮಟ್ಟದ ಸಮಾಜದ ಸಭೆ ನಡೆಸಿ, ಅಂತಮ ತೀರ್ಮಾನ ತೆಗೆದುಕೊಂಡಿದ್ದು, ಧರ್ಮ ಹಿಂದೂ, ಜಾತಿ ಲಿಂಗಾಯತ, ಉಪಜಾತಿ ಆದಿ ಬಣಜಿಗ ಎಂದೇ ಬರೆಸಲು ತಿಳಿಸಲಾಗಿದೆ ಎಂದರು.

ಸಮೀಕ್ಷೆದಾರರು ಮನೆಗೆ ಬಂದಾಗ ಕುಟುಂಬ ಗುರುತಿನ ಚೀಟಿ, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಸಮೀಕ್ಷಕರಿಗೆ ಸಹಕರಿಸಬೇಕು. ಸಮಾಜದ ಜನಸಂಖ್ಯೆ ಹೆಚ್ಚಳವಾದರೆ ಹೆಚ್ಚಿನ ಸೌಲಭ್ಯ ದೊರೆಯಲಿವೆ. ಹೀಗಾಗಿ ಕಡ್ಡಾಯವಾಗಿ ಎಲ್ಲರೂ ಸಮೀಕ್ಷೆಯಲ್ಲಿ ಭಾಗಿಯಾಗಿ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ವೀರಣ್ಣ ಮಂಗಾಣೆ, ವಿಶ್ವನಾಥ್ ಗೌನಹಳ್ಳಿ, ಗುಂಡರಾವ್ ಪದ್ಮಾಜಿ, ಗಿರಿರಾಜ್ ಯಳಿಮೇಲಿ, ಗುಪ್ತಲಿಂಗ, ರಾಜೇಂದ್ರ ಕರೆಕಲ್ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...