ಕಲಬುರಗಿ| ಯಾವಾಗಲೂ ಶುಚಿತ್ವ ಕಾಪಾಡಿಕೊಳ್ಳಿ: ಡಾ. ಲಕ್ಷ್ಮೀ ಪಾಟೀಲ ಮಾಕಾ

Date:

Share post:

ಕಲಬುರಗಿ: ಜಂಕ್ ಫುಡ್‍ಗೆ ಮೊರೆಹೋಗದೆ, ನಿಯಮಿತ ವ್ಯಾಯಮ ಮಾಡಿ ಯಾವಾಗಲೂ ಶುಚಿತ್ವ ಕಾಪಾಡಿಕೊಳ್ಳಿ ಎಂದು ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ಮಂಗಳವಾರದಂದು ಶರಣಬಸವ ವಿಶ್ವವಿದ್ಯಾಲಯದ, ವ್ಯವಹಾರ ಅಧ್ಯಾಯನ ನಿಕಾಯದ ಮಹಿಳಾ ಬಿ.ಬಿ.ಎ. ವಿಭಾಗ ಮತ್ತು ಶರಣಬಸವ ಆಯುರ್ವೆದಿಕ ಆಸ್ಪತ್ರೆ ಹಾಗೂ ವಿವಿಯ ಮಹಿಳಾ ಸಬಲೀಕರಣ ಕೋಶದ ವತಿಯಿಂದ ಆಯೋಜಿಸಿದ “ಮಹಿಳೆಯರ ಆರೋಗ್ಯ ಮತ್ತ ನೈರ್ಮಲ್ಯ” ಕುರಿತಾದ ಜಾಗ್ರತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಬೆಳಿಗ್ಗೆ ಬೇಗನೆ ಎದ್ದೇಳುವದನ್ನು ರೂಢಿಸಿಕೊಳ್ಳಿ, ನಿಮ್ಮ ಮನೆಗೆಲಸದಲ್ಲಿ ಹಿರಿಯರ ಕೈ ಜೋಡಿಸಿ. ಬೇರೆಯವರನ್ನು ನೋಡಿ ಅಸೂಯೆ ಪಡಬೇಡಿ ಹಾಗೂ ನಿಮ್ಮನ್ನು ನೀವು ಯಾರೊಂದಿಗೂ ಹೋಲಿಸಿಕೊಳ್ಳಬೇಡಿ. ಸದಾ ಲವಲವಿಕೆಯಿಂದಿದ್ದು, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚವಾಗಿರಿಸಿಕೊಳ್ಳಿ. ಯಾವಗಲೂ ಕೈ ತೊಳೆಯುವ ಅಭ್ಯಾಸ ರೂಢಿಸಿಕೊಳ್ಳಿ ಇದರಿಂದ ಮನಸ್ಸು ಉಲ್ಲಾಸವಾಗಿ ಆರೋಗ್ಯದಿಂದಿರುವಿರಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶರಣಬಸವ ಆಯುರ್ವೆದಿಕ ಆಸ್ಪತ್ರೆಯ ಡಾ. ರುದ್ರಾಣಿ ದೇಶಮುಖ ಮಾತನಾಡಿದರು. ಮಹಿಳಾ ಬಿ.ಬಿ.ಎ. ವಿಭಾಗದ ಚೇರ್‍ಪರ್ಸನ್ ಡಾ. ಶಿಲ್ಪಾ ಕಂದಗೂಳ, ವಿವಿಯ ಮಹಿಳಾ ಸಬಲೀಕರಣ ಕೋಶದ ಚೇರ್‍ಪರ್ಸನ್ ಡಾ. ಶಿಲ್ಪಾ ಶ್ರೀಗಿರಿ ಹಾಗೂ ನೀರಜ ತಡಕಲ, ಶಿವರಾಜ ನಾಲವಾರ, ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...