ಕಲಬುರಗಿ| ದಸರಾ ಹಬ್ಬದ ಪ್ರಯುಕ್ತ ಕೆ.ಕೆ.ಆರ್.ಟಿ.ಸಿ ಸಂಸ್ಥೆಯಿಂದ 500 ಹೆಚ್ಚುವರಿ ಬಸ್ ಕಾರ್ಯಾಚರಣೆ: ಡಾ.ಬಿ.ಸುಶೀಲಾ

Date:

Share post:

ಕಲಬುರಗಿ: ದಸರಾ ಹಬ್ಬ, ವಾರಾಂತ್ಯ ಹಾಗೂ ಸಾಲು ರಜೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರದೇಶದ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಸೋಲಾಪೂರದ ತುಳಜಾಪುರಕ್ಕೆ ಹೋಗಿ ಬರಲು ಪ್ರಯಾಣಿಕರ ಅನುಕೂಲಕ್ಕಾಗಿ 500 ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಮತ್ತು ಪ್ರಯಾಣಿಕರು ಇದರ ಸೌಲಭ್ಯ ಪಡೆಯಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸೆಪ್ಟೆಂಬರ್ 25, 26 ಹಾಗೂ 29 ರಂದು ಸಂಸ್ಥೆ ವ್ಯಾಪ್ತಿಯ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು, ತುಳಜಾಪೂರ ಸೇರಿದಂತೆ ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಸೆಪ್ಟೆಂಬರ್ 26, 27 ಹಾಗೂ 30 ರಂದು ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ಹೆಚ್ಚುವರಿ ವಾಹನಗಳ ಕಾರ್ಯಾಚರಣೆಗೊಳಿಸಲಾಗುತ್ತಿದೆ. ಇನ್ನು ಹಬ್ಬ ಮತ್ತು ರಜೆ ಮುಗಿದ ನಂತರ ಅಕ್ಟೋಬರ್ 3 ರಿಂದ 5ರ ವರೆಗೆ ಸಹ ಸಂಚಾರ ದಟ್ಟಣೆಗನುಗುಣವಾಗಿ ವಾಹನಗಳ ಕಾರ್ಯಾಚರಣೆ ನಡೆಯಲಿದೆ ಎಂದಿದ್ದಾರೆ.

 

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಬಸ್ ನಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅವಕಾಶವಿದ್ದು, ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿರುವ 18 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮುಖಾಂತರ ಆಸನ ಕಾಯ್ದಿರಿಸಬಹುದಾಗಿದೆ. 4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯತಿ ನೀಡಲಾಗುತ್ತಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್ ಅಪ್ ಪಾಯಿಂಟ್ ಸ್ಥಳ ಮತ್ತು ಹೆಸರು ಗಮನಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...