ಕಲಬುರಗಿ| ಮೂರು ಹೊಸದಾಗಿ ಕಲ್ಲು ಗಣಿಗಾರಿಕೆಗೆ ಲೈಸೆನ್ಸ್ ನೀಡಲು ಒಪ್ಪಿಗೆ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್

Date:

Share post:

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ ಫೋರ್ಸ್ (ಗಣಿ) ಹಾಗೂ ಜಿಲ್ಲಾ ಕಲ್ಲು ಪುಡಿ ಘಟಕಗಳ ಲೈಸನ್ಸ್ ನೀಡಿಕೆ ನಿಯಂತ್ರಣ ಪ್ರಾಧಿಕಾರದ ಸಭೆಯಲ್ಲಿ ಕಲಬುರಗಿ, ಕಾಳಗಿ, ಕಮಲಸಪೂರ ತಾಲೂಕಿನಲ್ಲಿ ತಲಾ ಒಂದರಂರೆ ಕಲ್ಲು ಗಣಿಗಾರಿಕೆ ನಡೆಸಲು ಲೈಸೆನ್ಸ್ ನೀಡಲು ಸಭೆ ಒಪ್ಪಿಗೆ ಸೂಚಿಸಿದೆ.

ಕಲಬುರಗಿ ತಾಲೂಕಿನ ಭೀಮಳ್ಳಿ ಮತ್ತು ಕಮಲಾಪುರ ತಾಲೂಕಿನ ಜೀವಣಗಿಯಲ್ಲಿ ಕಟ್ಟಡ ಕಲ್ಲು ಗಣಿಗಾರಿಕೆಗೆ ಮತ್ತು ಕಾಳಗಿ ತಾಲೂಕಿನ ಹುಲುಸಗೂಡನಲ್ಲಿ ಸವಳು ಮಣ್ಣು ರಫ್ತು(ಫುಲರ್ಸ್) ಗಣಿಗಾರಿಕೆ ನಡೆಸಲು ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು-1994ರಂತೆ ಟಾಸ್ಕ್ ಪೋರ್ಸ್ ಸಮಿತಿ ಒಪ್ಪಿಗೆ ಸೂಚಿಸಿದೆ.

ಇದೇ‌ ಸಂದರ್ಭದಲ್ಲಿ ನಡೆದ ಜಿಲ್ಲಾ ಕಲ್ಲು ಪುಡಿ ಘಟಕ ನಿಯಂತ್ರಣ ಸಮಿತಿ ಸಭೆಯಲ್ಲಿ ಕಾಳಗಿ ಮತ್ತು ಕಲಬುರಗಿ ತಾಲೂಕಿನಲ್ಲಿ ತಲಾ ಒಂದು ಕ್ರಶರ್ ಯೂನಿಟ್ ಘಟಕ ಕಾರ್ಯಾರಂಭಕ್ಕೂ ಫಾರ್ಮ್-ಸಿ ಪರವಾನಿಗೆ ನೀಡಲು ಸಭೆ ಅನುಮೋದನೆ ನೀಡಿದೆ.

ಅಕ್ರಮ ಗಣಿಗಾರಿಕೆ,53.31 ಲಕ್ಷ‌ ರೂ. ದಂಡ:

ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸೋಮಶೇಖರ ಮಾತನಾಡಿ, ಪ್ರಸಕ್ತ 2025-26ನೇ ಸಾಲಿನಲ್ಲಿ ಏಪ್ರಿಲ್ ನಿಂದ ಇಲ್ಲಿಯವರೆಗೆ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಮಾಡಿಕೊಂಡಿದಕ್ಕಾಗಿ 139 ಪ್ರಕರಣಗಳಲ್ಲಿ 53.31 ಲಕ್ಷ‌ ರೂ. ದಂಡ‌ ವಿಧಿಸಿದೆ. ಇದರಲ್ಲಿ 81 ಎಫ್.ಐ.ಆರ್ ದಾಖಲಿಸಿದ್ದು, 6 ಪ್ರಕರಣಗಳಲ್ಲಿ ಇಲಾಖೆಯೆ ಪಿ.ಸಿ.ಆರ್ ವರದಿ ತಯಾರಿಸಿ ಸಂಬಂಧಿಸಿದ ಜೆ.ಎಂ.ಎಫ.ಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ನಿಗದಿತ ಮಾರ್ಗದಲ್ಲಿ ಸಾಗಾಣಿಕೆ ಮಾಡದೆ ನಿಯಮಾವಳಿ ಉಲ್ಲಂಘಿಸಿದಕ್ಕಾಗಿ 10 ವಾಹನಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಎಸ್.ಪಿ ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ ಕನಿಕಾ ಸಿಕ್ರಿವಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಸಹಾಯಕ ಆಯುಕ್ತ ಪ್ರಭುರೆಡ್ಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪರಿಸರ ಅಧಿಕಾರಿಗಳು ಸೇರಿದಂತೆ ತಾಲೂಕಿನ ತಹಶೀಲ್ದಾರರು, ಪೊಲೀಸ್ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...