ಕಲಬುರಗಿ| ಧಾರಾಕಾರ ಮಳೆಯಲ್ಲೇ ಪ್ರವಾಹಪೀಡಿತ ಗ್ರಾಮಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇಂತಹ ಸನ್ನಿವೇಶದಲ್ಲಿ ಪ್ರವಾಹ ಪೀಡಿತ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಈ ಸಂದರ್ಭದಲ್ಲಿ ಅವರು ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. ಗ್ರಾಮಸ್ಥರಿಗೆ ಸ್ಪಂದಿಸಿದ ಸಚಿವರು ಮಳೆ ತುಸು ಕಡಿಮೆಯಾದ ನಂತರ ಗ್ರಾಮಕ್ಕೆ ಭೇಟಿ ನೀಡಿ ಬೇಡಿಕೆ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

ಗ್ರಾಮದ ಸ್ಥಳಾಂತರಕ್ಕೆ ತಾವು ಮುಂದಾಗಿರುವುದಾಗಿ ಹೇಳಿದ ಸಚಿವರು ಎಷ್ಟು ಕುಟುಂಬಗಳು ಸ್ಥಳಾಂತರಗೊಳ್ಳಬೇಕು ಎನ್ನುವ ಬಗ್ಗೆ ತೀರ್ಮಾನಿಸುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದರು.

ಈ ನಡುವೆ ಗ್ರಾಮಸ್ಥರೊಂದಿಗೆ ಗ್ರಾಮಸಭೆ ನಡೆಸುವಂತೆ ಸ್ಥಳದಲ್ಲಿದ್ದ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಎಸಿ ಸಾಹಿತ್ಯ ಅವರಿಗೆ ಸೂಚಿಸಿದರು.

ಗ್ರಾಮಸ್ಥರಿಗೆ ಬೇಕಾಗುವ ಸೌಲಭ್ಯ ಒದಗಿಸುವಂತೆ ಕಾಳಗಿ ತಹಸೀಲ್ದಾರಗೆ ಸೂಚಿಸಿದರು.

ನಿರಂತರ ಮಳೆಯಿಂದ ಬೆಣ್ಣೆತೊರ ಜಲಾಶಯದಿಂದ ನೀರು ಹರಿಬಿಟ್ಟಿದ್ದರಿಂದ ಹಳೆ ಹೆಬ್ಬಾಳ ಗ್ರಾಮಕ್ಕೆ ನೀರು ನುಗ್ಗಿದ್ದರಿಂದ ಗ್ರಾಮಸ್ಥರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಊಟ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...