ಕಲಬುರಗಿ| ಧಾರಾಕಾರ ಮಳೆಯಲ್ಲೇ ಪ್ರವಾಹಪೀಡಿತ ಗ್ರಾಮಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇಂತಹ ಸನ್ನಿವೇಶದಲ್ಲಿ ಪ್ರವಾಹ ಪೀಡಿತ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಈ ಸಂದರ್ಭದಲ್ಲಿ ಅವರು ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. ಗ್ರಾಮಸ್ಥರಿಗೆ ಸ್ಪಂದಿಸಿದ ಸಚಿವರು ಮಳೆ ತುಸು ಕಡಿಮೆಯಾದ ನಂತರ ಗ್ರಾಮಕ್ಕೆ ಭೇಟಿ ನೀಡಿ ಬೇಡಿಕೆ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

ಗ್ರಾಮದ ಸ್ಥಳಾಂತರಕ್ಕೆ ತಾವು ಮುಂದಾಗಿರುವುದಾಗಿ ಹೇಳಿದ ಸಚಿವರು ಎಷ್ಟು ಕುಟುಂಬಗಳು ಸ್ಥಳಾಂತರಗೊಳ್ಳಬೇಕು ಎನ್ನುವ ಬಗ್ಗೆ ತೀರ್ಮಾನಿಸುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದರು.

ಈ ನಡುವೆ ಗ್ರಾಮಸ್ಥರೊಂದಿಗೆ ಗ್ರಾಮಸಭೆ ನಡೆಸುವಂತೆ ಸ್ಥಳದಲ್ಲಿದ್ದ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಎಸಿ ಸಾಹಿತ್ಯ ಅವರಿಗೆ ಸೂಚಿಸಿದರು.

ಗ್ರಾಮಸ್ಥರಿಗೆ ಬೇಕಾಗುವ ಸೌಲಭ್ಯ ಒದಗಿಸುವಂತೆ ಕಾಳಗಿ ತಹಸೀಲ್ದಾರಗೆ ಸೂಚಿಸಿದರು.

ನಿರಂತರ ಮಳೆಯಿಂದ ಬೆಣ್ಣೆತೊರ ಜಲಾಶಯದಿಂದ ನೀರು ಹರಿಬಿಟ್ಟಿದ್ದರಿಂದ ಹಳೆ ಹೆಬ್ಬಾಳ ಗ್ರಾಮಕ್ಕೆ ನೀರು ನುಗ್ಗಿದ್ದರಿಂದ ಗ್ರಾಮಸ್ಥರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಊಟ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...