ಕಲಬುರಗಿ| ಧಾರಾಕಾರ ಮಳೆಯಲ್ಲೇ ಪ್ರವಾಹಪೀಡಿತ ಗ್ರಾಮಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇಂತಹ ಸನ್ನಿವೇಶದಲ್ಲಿ ಪ್ರವಾಹ ಪೀಡಿತ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಈ ಸಂದರ್ಭದಲ್ಲಿ ಅವರು ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. ಗ್ರಾಮಸ್ಥರಿಗೆ ಸ್ಪಂದಿಸಿದ ಸಚಿವರು ಮಳೆ ತುಸು ಕಡಿಮೆಯಾದ ನಂತರ ಗ್ರಾಮಕ್ಕೆ ಭೇಟಿ ನೀಡಿ ಬೇಡಿಕೆ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

ಗ್ರಾಮದ ಸ್ಥಳಾಂತರಕ್ಕೆ ತಾವು ಮುಂದಾಗಿರುವುದಾಗಿ ಹೇಳಿದ ಸಚಿವರು ಎಷ್ಟು ಕುಟುಂಬಗಳು ಸ್ಥಳಾಂತರಗೊಳ್ಳಬೇಕು ಎನ್ನುವ ಬಗ್ಗೆ ತೀರ್ಮಾನಿಸುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದರು.

ಈ ನಡುವೆ ಗ್ರಾಮಸ್ಥರೊಂದಿಗೆ ಗ್ರಾಮಸಭೆ ನಡೆಸುವಂತೆ ಸ್ಥಳದಲ್ಲಿದ್ದ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಎಸಿ ಸಾಹಿತ್ಯ ಅವರಿಗೆ ಸೂಚಿಸಿದರು.

ಗ್ರಾಮಸ್ಥರಿಗೆ ಬೇಕಾಗುವ ಸೌಲಭ್ಯ ಒದಗಿಸುವಂತೆ ಕಾಳಗಿ ತಹಸೀಲ್ದಾರಗೆ ಸೂಚಿಸಿದರು.

ನಿರಂತರ ಮಳೆಯಿಂದ ಬೆಣ್ಣೆತೊರ ಜಲಾಶಯದಿಂದ ನೀರು ಹರಿಬಿಟ್ಟಿದ್ದರಿಂದ ಹಳೆ ಹೆಬ್ಬಾಳ ಗ್ರಾಮಕ್ಕೆ ನೀರು ನುಗ್ಗಿದ್ದರಿಂದ ಗ್ರಾಮಸ್ಥರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಊಟ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...